ಸ್ಥಳೀಯ

ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಮುಚ್ಚುವಂತೆ ಮಾ. 3ರಂದು ಸಾಮೂಹಿಕ ಧರಣಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಮಾರ್ಚ್ 3ರಂದು ಸಾಮೂಹಿಕ ಧರಣಿ ನಡೆಸಲಾಗುವುದಾಗಿ ಹೋರಾಟ ಸಮಿತಿ ಪ್ರಕಟಿಸಿದೆ.

chennai-shopping
maithri

ಮಾಜಿ ಸಚಿವ ಹಾಗೂ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಬಿ. ರಮಾನಾಥ ರೈ ಅವರು ಬಿ.ಸಿ.ರೋಡ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಟೋಲ್ ಸಂಗ್ರಹ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೆ ತಂದಿರುವ ಹಲವು ನಿಯಮಗಳು ಪಾಲನೆಯಾಗುತ್ತಿಲ್ಲ ಎಂಬ ಆರೋಪವಿದೆ. ಆದ್ದರಿಂದ ಟೋಲ್ ವಸೂಲಿ ತಕ್ಷಣ ನಿಲ್ಲಿಸಿ, ಟೋಲ್ ಕೇಂದ್ರವನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು ಎಂಬುದು ಸಮಿತಿಯ ಒತ್ತಾಯವಾಗಿದೆ ಎಂದು ಅವರು ಹೇಳಿದರು.ಹೋರಾಟಗಾರ ಮುನೀರ್ ಕಾಟಿಪಳ್ಳ ಮಾತನಾಡಿ, ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಸಭೆ ನಡೆಸಿ ಹೂಡಿಕೆ ಹಾಗೂ ವಸೂಲಾತಿ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ಸುರತ್ಕಲ್‌ನ ಹೋರಾಟ ಮಾದರಿಯನ್ನು ಅನುಸರಿಸಿ ಮುಂದಿನ ಹಂತದಲ್ಲಿ ಇನ್ನಷ್ಟು ಸಂಘಟನೆಗಳನ್ನು ಒಗ್ಗೂಡಿಸಿ ತೀವ್ರ ಹೋರಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಬಿ. ಶೇಖರ್, ಮೋಹನ್ ಶೆಟ್ಟಿ, ಪಿಯೂಸ್ ಎಲ್ ರೊಡ್ರಿಗಸ್ ಹಾಗೂ ಕೋಶಾಧಿಕಾರಿ ಬೇಬಿ ಕುಂದರ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122