tamanvi
ಸ್ಥಳೀಯ

ನೇತ್ರಾವತಿ ತೀರದಲ್ಲಿ ತೇಲಿದ ಆಧಾರ್ ಕಾರ್ಡ್‌ಗಳು: ಬಂಟ್ವಾಳದಲ್ಲಿ ಭಾರೀ ಸಂಚಲನ!!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ:ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ 10ನೇ ಮೈಲ್ ಕಲ್ಲಿನ ಬಳಿ ನೇತ್ರಾವತಿ ನದಿಯ ದಡದಲ್ಲಿ ಅನೇಕ ಆಧಾರ್ ಕಾರ್ಡ್‌ಗಳು ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರ ಸಂಜೆ ನದಿತೀರದಲ್ಲಿ ನಡೆದಾಡುತ್ತಿದ್ದ ವ್ಯಕ್ತಿಯೊಬ್ಬರು ನೀರಿನ ಮೇಲೆ ತೇಲುತ್ತಿದ್ದ ಹಲವಾರು ಆಧಾರ್ ಕಾರ್ಡ್‌ಗಳನ್ನು ಗಮನಿಸಿ ತಕ್ಷಣ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದರು.

ಪತ್ತೆಯಾದ ಕಾರ್ಡ್‌ಗಳಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸಗಳು ಇರುವುದಾಗಿ ತಿಳಿದುಬಂದಿದೆ. ಅಧಿಕೃತ ಗುರುತಿನ ಚೀಟಿಗಳು ನದಿಗೆ ಹೇಗೆ ತಲುಪಿದವು ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷರ ಪ್ರಕಾರ, ಹಲವರು ಆಧಾರ್ ತಿದ್ದುಪಡಿ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದು, ಪರಿಷ್ಕೃತ ಕಾರ್ಡ್‌ಗಳು ಅಂಚೆ ಮೂಲಕ ಬರಬೇಕಾಗಿತ್ತು. ಆದರೆ ವಿಳಂಬವಾದ ಕಾರಣ ಕೆಲವರು ತುರ್ತು ಅಗತ್ಯಕ್ಕಾಗಿ ಸೈಬರ್ ಕೇಂದ್ರಗಳಲ್ಲಿ ಪ್ರತಿ ಪಡೆದಿದ್ದರು. ಈ ನಡುವೆ ಬಂದ ಮೂಲ ಕಾರ್ಡ್‌ಗಳು ಫಲಾನುಭವಿಗಳಿಗೆ ತಲುಪದೆ ಎಸೆಯಲ್ಪಟ್ಟಿರುವ ಸಾಧ್ಯತೆ ಕುರಿತು ಅನುಮಾನ ವ್ಯಕ್ತವಾಗಿದೆ.

ಈ ಘಟನೆಯ ಹಿನ್ನೆಲೆ ಕುರಿತು ಸಮಗ್ರ ತನಿಖೆ ನಡೆಸಿ, ದಾಖಲೆಗಳ ಸುರಕ್ಷತೆ ಹಾಗೂ ವಿತರಣೆ ಪ್ರಕ್ರಿಯೆಯಲ್ಲಿ ಲೋಪಗಳಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 133