ಸ್ಥಳೀಯ

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ ದೊಡ್ಡ ರಾಷ್ಟ್ರಧ್ವಜ ಪುತ್ತೂರಿನಲ್ಲಿ ಮತ್ತೆ ಸೋಮವಾರ ಬಾನಂಗಳದಲ್ಲಿ ರಾರಾಜಿಸಿತು.

maithri

ಕೆಲ ದಿನಗಳ ಹಿಂದೆ ಸುರಿದ ಗಾಳಿ – ಮಳೆಗೆ ರಾಷ್ಟ್ರ ಧ್ವಜ ನೆಲಕ್ಕುರುಳಿ, ಸುದ್ದಿಯಾಗಿತ್ತು. ಗಾಳಿಯ ಹೊಡೆತಕ್ಕೆ ಹಾಗೂ ಮಳೆಯ ಭಾರಕ್ಕೆ ರಾಷ್ಟ್ರಧ್ವಜ ಹರಿದು ಹೋಗಿತ್ತು. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಸ್ತಂಭಕ್ಕೆ ಹೊಸ ರಾಷ್ಟ್ರ ಧ್ವಜವನ್ನು ಹಾಕಿರಲಿಲ್ಲ. ಇದೀಗ ವಾತಾವರಣ ತಿಳಿಯಾಗಿದ್ದು, ರಾಷ್ಟ್ರಧ್ವಜ ಎಲ್ಲರ ಗಮನ ಸೆಳೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರಸಭೆ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಈ ವಾರ ವಾತಾವರಣ ತಿಳಿಯಾಗಿರುವ ಬಗ್ಗೆ ಹವಾಮಾನ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. ಇದರ ಬಗ್ಗೆ ಪುಡಾ ಜೊತೆಗೆ ಮಾತುಕತೆ ನಡೆಸಿದ್ದೇವೆ. ಮುಂದೆ ಗಾಳಿ- ಮಳೆಯ ಮುನ್ಸೂಚನೆ ಇದ್ದರೆ, ರಾಷ್ಟ್ರಧ್ವಜವನ್ನು ಇಳಿಸಲಾಗುವುದು ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124