ಸ್ಥಳೀಯ

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ ದೊಡ್ಡ ರಾಷ್ಟ್ರಧ್ವಜ ಪುತ್ತೂರಿನಲ್ಲಿ ಮತ್ತೆ ಸೋಮವಾರ ಬಾನಂಗಳದಲ್ಲಿ ರಾರಾಜಿಸಿತು.

chennai-shopping
maithri

ಕೆಲ ದಿನಗಳ ಹಿಂದೆ ಸುರಿದ ಗಾಳಿ – ಮಳೆಗೆ ರಾಷ್ಟ್ರ ಧ್ವಜ ನೆಲಕ್ಕುರುಳಿ, ಸುದ್ದಿಯಾಗಿತ್ತು. ಗಾಳಿಯ ಹೊಡೆತಕ್ಕೆ ಹಾಗೂ ಮಳೆಯ ಭಾರಕ್ಕೆ ರಾಷ್ಟ್ರಧ್ವಜ ಹರಿದು ಹೋಗಿತ್ತು. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಸ್ತಂಭಕ್ಕೆ ಹೊಸ ರಾಷ್ಟ್ರ ಧ್ವಜವನ್ನು ಹಾಕಿರಲಿಲ್ಲ. ಇದೀಗ ವಾತಾವರಣ ತಿಳಿಯಾಗಿದ್ದು, ರಾಷ್ಟ್ರಧ್ವಜ ಎಲ್ಲರ ಗಮನ ಸೆಳೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರಸಭೆ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಈ ವಾರ ವಾತಾವರಣ ತಿಳಿಯಾಗಿರುವ ಬಗ್ಗೆ ಹವಾಮಾನ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. ಇದರ ಬಗ್ಗೆ ಪುಡಾ ಜೊತೆಗೆ ಮಾತುಕತೆ ನಡೆಸಿದ್ದೇವೆ. ಮುಂದೆ ಗಾಳಿ- ಮಳೆಯ ಮುನ್ಸೂಚನೆ ಇದ್ದರೆ, ರಾಷ್ಟ್ರಧ್ವಜವನ್ನು ಇಳಿಸಲಾಗುವುದು ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122