ಸ್ಥಳೀಯ

ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ, ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ, ಕೋಶಾಧಿಕಾರಿಯಾಗಿ ಮಹೇಶ್ ಕೆ. ಸವಣೂರು ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಚುನಾಯಿತರಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ ಮಹೇಶ್ ಕೆ. ಸವಣೂರು ಚುನಾಯಿತರಾಗಿದ್ದಾರೆ.

ಏ 6ರಂದು ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆದಿತ್ತು . ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಚುನಾವಣೆ ನಡೆದು ಬಳಿಕ ಮತ ಎಣಿಕೆ ನಡೆದಿತ್ತು.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಜಗನ್ನಾಥ ರೈ ವಿಜೇತರಾಗಿದ್ದು, ಇನ್ನಿಬ್ಬರು ಸ್ಪರ್ಧಿಗಳು ಪರಾಭವಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಆಯ್ಕೆಯಾಗಿದ್ದು, ಎದುರಾಳಿ ವಿಶ್ವನಾಥ ನಂದಿಲ, ಪರಾಭವಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಚಿನ್ಮಯ್ ರೈ ಅವಿರೋಧ ಆಯ್ಕೆಗೊಂಡಿದ್ದು .ಜತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಆಯ್ಕೆಗೊಂಡಿದ್ದು ಹೀರಾ ಉದಯ್ ಪರಾಭವಗೊಂಡಿದ್ದಾರೆ. ಕೋಶಾಧಿಕಾರಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಹೇಶ್ ಕೆ. ಸವಣೂರು ಆಯ್ಕೆಗೊಂಡಿದ್ದು, ಚಿದಾನಂದ ರೈ, ಕೊಡಿಂಬಾಡಿ ಪರಾಭವಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 119