ಮತದಾರರನ್ನು ಸೆಳೆಯಲಿರುವ ಸಖಿ, ಸಾಂಪ್ರದಾಯಿಕ, ವಿಶೇಷ ಚೇತನರ, ಯುವ, ಧ್ಯೇಯ ಆಧಾರಿತ ಮತಗಟ್ಟೆಗಳು
ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿ.ಪಂ. ಮೂಲಕ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಪುತ್ತೂರು ತಾಲೂಕು ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸುವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 9 ವಿಶೇಷ ಮಾದರಿ ಮತಗಟ್ಟೆಗಳನ್ನು ರೂಪಿಸುವ ಮೂಲಕ ಮತದಾರರನ್ನು ಮತಗಟ್ಟೆಗೆ ವಿಶೇಷವಾಗಿ ಆಹ್ವಾನಿಸುವಂತಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಲೋಕಸಭಾ ಕ್ಷೇತ್ರವಾರು SVEEP (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ) ಕಾರ್ಯಕ್ರಮಗಳ ಅಡಿಯಲ್ಲಿ ಚುನಾವಣೆ ಮಹತ್ವ, ಅರಿವು ಮೂಡಿಸಲು ನಾನಾ ಕಾರ್ಯಕ್ರಮಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲೊಂದು ಮಾದರಿ ಮತಗಟ್ಟೆಗಳು.
ಮಾದರಿ ಮತಗಟ್ಟೆಗಳು ವರ್ಣಮಯ
ಒಟ್ಟು 5 ವಿಷಯಗಳಲ್ಲಿ ಮತಗಟ್ಟೆಗಳನ್ನು ವಿಭಾಗಿಸಲಾಗಿದ್ದು, ಆಯಾಯ ವಿಷಯಗಳಿಗೆ ಸಂಬಂಧಪಟ್ಟ ಚಿತ್ರಗಳನ್ನು ಬಿಡಿಸಲಾಗುತ್ತಿದೆ. ಸಖಿ ಮತಗಟ್ಟೆಗಳಾಗಿ ಸ.ಹಿ.ಪ್ರಾ ಶಾಲೆ ಕಬಕ, ಸ.ಹಿ.ಪ್ರಾ.ಶಾಲೆ ಕೈಕಾರ, ಸ.ಹಿ.ಪ್ರಾ.ಶಾಲೆ ಹಿರೇಬಂಡಾಡಿ, ಸ.ಹಿ.ಪ್ರಾ.ಶಾಲೆ ಬಜತ್ತೂರು, ಸ.ಹಿ.ಪ್ರಾ.ಶಾಲೆ ಸಾಮೆತ್ತಡ್ಕ, ಸಾಂಪ್ರದಾಯಿಕ ಮತಗಟ್ಟೆಯಾಗಿ (ಕಂಬಳ) ಸ.ಹಿ.ಪ್ರಾ.ಶಾಲೆ ಕೋಡಿಂಬಾಡಿ, ಧ್ಯೇಯ ಆಧಾರಿತ ಮತಗಟ್ಟೆಯಾಗಿ ಸ.ಉ.ಹಿ.ಪ್ರಾ.ಶಾಲೆ ಕಾವು, ಯುವಜನ ನಿರ್ವಹಣೆ ಮತಗಟ್ಟೆಯಾಗಿ ಸರ್ವೆ ಸ.ಹಿ.ಪ್ರಾ.ಶಾಲೆ ವರ್ಣಮಯವಾಗಿ ಕಾಣಲಿದೆ.ಮತಕೇಂದ್ರದ ಗೋಡೆಗಳಲ್ಲಿ ಕಲಾಚಿತ್ರಗಳ ಚಿತ್ತಾರ
ವೈವಿಧ್ಯಮಯ ಚಿತ್ರಗಳು ಜನರಿಗೆ ಮತಕೇಂದ್ರಕ್ಕೆ ಆಗಮಿಸುವಾಗ ಕಂಬಳ ಇನ್ನಿತರ ಚಿತ್ತಾರಗಳು ಎದುರುಗೊಳ್ಳಲಿವೆ. ಮಹಿಳಾ ಸಾಧಕಿಯರ ಚಿತ್ರಗಳು, ಪರಿಸರ ರಕ್ಷಣೆಯ ಅರಿವು, ವಿಶೇಷಚೇತನರ ಸಾಧನೆಗಳ ಅವತರಣಿಕೆ ಹೀಗೆ ಒಂದೇ ಎರಡೇ, ನಮ್ಮ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಮತದಾರರು ಕಣ್ತುಂಬಿಕೊಳ್ಳಬಹುದು. ಇಷ್ಟೇ ಅಲ್ಲದೇ ಮತದಾನದ ವಿಷಯಾಧಾರಿತ ಭಿತ್ತಿಚಿತ್ರಗಳು ನೋಡುಗರ ಕಣ್ಮನಗಳನ್ನು ಸೆಳೆಯಲಿವೆ.
ವಿಧಾನಸಭಾ ಕ್ಷೇತ್ರದ ಸ್ವೀಪ್ ಕಾರ್ಯಕ್ರಗಳ ಮುಖ್ಯಸ್ಥರಾಗಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಅವರ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಅವರ ಮಾರ್ಗದರ್ಶನದಲ್ಲಿ ನುರಿತ ಚಿತ್ರಕಲಾ ಶಿಕ್ಷಕರ ತಂಡ ಚಿತ್ರಬಿಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಂಬೆಟ್ಟು ಸರಕಾರ ಪದವಿ ಪೂರ್ವ ಕಾಲೇಜಿನ ಚಿತ್ರ ಕಲಾ ಶಿಕ್ಷಕ ಜಗನ್ನಾಥ ಅರಿಯಡ್ಕ, ಕೆಯ್ಯೂರು ಕರ್ನಾಟಕ ಪಬ್ಲಿಕ್ ಶಾಲೆಯ ಚಿತ್ರಕಲಾ ಶಿಕ್ಷಕ ಪ್ರಕಾಶ್ ವಿಟ್ಲ, ನರಿಮೊಗ್ರು ಸಾಂದೀಪನಿ ವಿದ್ಯಾಸಂಸ್ಥೆಯ ಚಿತ್ರಕಲಾ ಶಿಕ್ಷಕ ಸುಚೇತ್ ಎಂ. ಅವರು ಮಾದರಿ ಮತಗಟ್ಟೆಗಳನ್ನು ವರ್ಣಮಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ವಿಭಿನ್ನ ಚಿತ್ರಗಳ ಮೂಲಕ ಕಂಗೊಳಿಸಲಿರುವ ಮತಗಟ್ಟೆಗಳು
ಮತಗಟ್ಟೆಗಳ ಗೋಡೆಗಳು ನೈಜ ಚಿತ್ರಗಳಿಂದ ಮೊದಲ್ಗೊಂಡು, ಮಧುಬನಿ ಕಲಾ ಶೈಲಿ, ವರ್ಲಿ ಕಲಾ ಶೈಲಿ, ಕಾರ್ಟೂನ್ ಚಿತ್ರಗಳು, ಅಲಂಕಾರಿಕ ಚಿತ್ರಗಳ ಮೂಲಕ ಕಂಗೊಳಿಸುವ ಕಾರ್ಯವನ್ನು ಚಿತ್ರಕಲಾ ಶಿಕ್ಷಕರು ಮಾಡುತ್ತಿದ್ದಾರೆ.
–ಹನಮ ರೆಡ್ಡಿ, ಕಾರ್ಯನಿರ್ವಾಹಕ ಅಧಿಕಾರಿ ತಾ.ಪಂ. ಪುತ್ತೂರು
ಮತಗಟ್ಟೆ ಕೇಂದ್ರಗಳ ಗೋಡೆಗಳಲ್ಲಿ ಚಿತ್ರಗಳ ಚಿತ್ತಾರ
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1crime
- 1crime news
- 0cyclothon
- 0darmasthala
- 0death news
- 0dust bin
- 0education
- 0fraud
- 0gl
- 0gods own country
- 0gold
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0kukke - kollur temple
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
37.65 ಕೋಟಿ ರೂ. ವೆಚ್ಚದ ಶ್ರಮಿಕ ವಸತಿ ಶಾಲೆಗೆ ಕುರಿಯದಲ್ಲಿ ಶಿಲಾನ್ಯಾಸ | ತಾಲೂಕು ಕೇಂದ್ರಕ್ಕೆ ಮಂಜೂರಾಗಿರುವುದು ಪುತ್ತೂರಿಗೆ ಮಾತ್ರ: ಶಾಸಕ ಅಶೋಕ್ ರೈ
ಪುತ್ತೂರು: ರಾಜ್ಯದ ಪ್ರತಿ ಜಿಲ್ಲೆಗಳಿಗೂಂದು ಶ್ರಮಿಕ ಶಾಲೆ ಮಂಜೂರು ಮಾಡುತ್ತಿದೆ.…
ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ
ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…
ಅಂಬೇಡ್ಕರ್ ನೀಡಿರುವ ಸಂವಿಧಾನ ದೇಶಕ್ಕೆ ದೊಡ್ಡ ಕೊಡುಗೆ | ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್
ಪುತ್ತೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವು ದೇಶಕ್ಕೆ ಅತೀ ದೊಡ್ಡ…
ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಬೆಂಗಳೂರಿನಲ್ಲಿ ಜನತಾ ಅವಾರ್ಡ್ 2026
ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ | ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…
ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…
ಆತ್ಮಹತ್ಯೆಗೆ ಶರಣಾದ ಮೆಡಿಕಲ್ ರೆಪ್!
ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ…
ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ
ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…
ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಜನತಾ ನ್ಯೂಸ್ ಅವಾರ್ಡ್ಸ್ 2026 ಆಯ್ಕೆ
ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ…






















