ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ ಪೆರ್ನಾಜೆ ಅವರನ್ನು ಇತ್ತೀಚೆಗೆ ಬೆಂಗಳೂರಿನ ನಾಗರಬಾವಿ ಕೆಎಲ್ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯು ನಲ್ಲಿ ಜನತಾ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಮನರಂಜನೆ ಫ್ಯಾಶನ್ ಶೋ ಮ್ಯೂಸಿಕಲ್ ನೈಟ್ ನೃತ್ಯ ಸಂಜೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜೇನು ಕೃಷಿ ಕ್ಷೇತ್ರದಲ್ಲಿನ ಸಾಧನೆಗಳ ಹಿನ್ನೆಲೆಯಲ್ಲಿ ಜನತಾ ನ್ಯೂಸ್ ಮ್ಯಾನೇಜಿಂಗ್ ಡೈರೆಕ್ಟರ್ ಆರ್ಯನ್ ಭಾರದ್ವಾಜ್ ಅವರು ಪೇಟ ಶಾಲು ತೊಡಿಸಿ ಹಾರ ಟ್ರೋಫಿ ಪ್ರಶಸ್ತಿ ಪತ್ರವನ್ನು ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜನತಾ ನ್ಯೂಸ್ ಕನ್ನಡ ಮುಖ್ಯ ಸಂಪಾದಕ, ಕರ್ನಾಟಕ ಯುವಶಕ್ತಿಯ ರಾಜ್ಯಾಧ್ಯಕ್ಷ ಕೆ ಎಸ್ ಲಿಂಗೇಗೌಡ ಅಧ್ಯಕ್ಷತೆ ವಹಿಸಿದ್ದರು. doczee ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಹ ಸಂಸ್ಥಾಪಕಿ ಮೋನಿಷಾ ಆರ್ಯನ್ ಭಾರದ್ವಾಜ್ ಬೆಂಗಳೂರು, ಎಕ್ಸ ರೀಜನಲ್ ಮ್ಯಾನೇಜರ್ ಆಫ್ ರಿಲಯನ್ಸ್ ಸೆಲ್ಯೂಲೋಸ್ ಪ್ರಾಡಕ್ಟ್ಸ್ ಲಿಮಿಟೆಡ್’ನ ಪಿ ಎಸ್ ಭಟ್ ನೂಜಿ ಪುತ್ತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶೋಭಾ ಹಾಗೂ ಹರಿಚೇತ್ ಕಾರ್ಯಕ್ರಮ ನಿರೂಪಿಸಿದರು.























