ರಾಜ್ಯ ವಾರ್ತೆಸ್ಥಳೀಯ

ದ್ವಿತೀಯ ಪಿಯು ಫಲಿತಾಂಶ: ಕರ್ನಾಟಕದಲ್ಲಿ ಮೋಡಿ ಮಾಡಿದ ಆಂಧ್ರ ಹುಡುಗ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬುಧವಾರ ಘೋಷಿಸಲಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೆಂಗೇರಿಯ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್‌ ಪಡೆದಿದ್ದಾರೆ.

maithri

600 ಅಂಕಗಳಿಗೆ 588 ಅಂಕ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ.

ವಿಶೇಷವೆಂದರೆ, ಗಂಧಂ ಗಿರಿ ವರುಣ್ ಸಂದೇಶ್ ಮೂಲತಃ ಆಂಧ್ರದ ನೆಲ್ಲೂರಿನವರು. ಐಎಎಸ್ ಮಾಡುವ ಕನಸಿನೊಂದಿಗೆ ಅವರು ಯೂನಿವರ್ಸಲ್ ಪಿಯು ಕಾಲೇಜಿಗೆ ಸೇರ್ಪಡೆಯಾಗಿದ್ದಾರೆ. ಅವರ ತಂದೆ ಹಾಗೂ ತಾಯಿ ಇಬ್ಬರೂ ಶಿಕ್ಷಕರು.

ಗಂಧಂ ಗಿರಿ ವರುಣ್ ಸಂದೇಶ್ ಅವರನ್ನು ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ ಅಭಿನಂದಿಸಿದ್ದಾರೆ.
ಯೂನಿವರ್ಸಲ್ ಸಂಸ್ಥೆಯ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 12 ವಿದ್ಯಾರ್ಥಿಗಳು ಫಸ್ಟ್‌‌ ಕ್ಲಾಸ್ ಪಾಸಾಗಿದ್ದು, ಉಳಿದಂತೆ ಎಲ್ಲಾ ವಿದ್ಯಾರ್ಥಿಗಳು ಉತ್ತಿರ್ಣಾರಾಗುವುದರ ಮೂಲಕ ಯೂನಿವರ್ಸಲ್ ಸಂಸ್ಥೆಯು 100% ರಿಸಲ್ಟ್ ಪಡೆದಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 155