ಸ್ಥಳೀಯ

ಅಶಕ್ತರಿಗೆ ನೆರವಾಗುವ ಶ್ರೀನಿಧಿ ಸೇವಾ ಟ್ರಸ್ಟ್ನ ಕಾರ್ಯ ಅಭಿನಂದನಾರ್ಹ : ನಿರ್ಮಲ್ ಕುಮಾರ್ ಜೈನ್

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜನಸೇವೆಯೇ ಜನಾರ್ಧನ ಸೇವೆಯಾಗಿದ್ದು, ನಿಸ್ವಾರ್ಥ ಸೇವೆಯ ರೂಪದಲ್ಲಿ ಭಗವಂತನನ್ನು ಕಾಣಬಹುದು. ಅಶಕ್ತರಿಗೆ ನೆರವಾಗುತ್ತಿರುವ ಶ್ರೀನಿಧಿ ಸೇವಾ ಟ್ರಸ್ಟಿನ ಕಾರ್ಯ ಅಭಿನಂದನಾರ್ಹವಾಗಿದೆ ಎಂದು ವಕೀಲ ನಿರ್ಮಲ್ ಕುಮಾರ್ ಜೈನ್ ಹೇಳಿದರು.
ಅವರು ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪುತ್ತೂರಿನ ಶ್ರೀನಿಧಿ ಸೇವಾ ಟ್ರಸ್ಟ್ (ರಿ.) ನಡೆಸಿಕೊಂಡು ಬರುತ್ತಿರುವ ಅಶಕ್ತರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪದ್ಮಲತಾ ಮಾತನಾಡಿ ಟ್ರಸ್ಟಿನ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿ, ಟ್ರಸ್ಟಿನ ಸಹಾಯಾರ್ಥವನ್ನು ಸದುಪಯೋಗ ಮಾಡಿಕೊಳ್ಳುವಂತೆ ಫಲಾನುಭವಿಗಳಿಗೆ ತಿಳಿಸಿದರು.
ಟ್ರಸ್ಟ್ನ ಅಧ್ಯಕ್ಷೆ ಉಷಾ ಕಾವು ಮಾತನಾಡಿ ಪರಸ್ಪರ ಸಹಾಯವೇ ಟ್ರಸ್ಟಿನ ಉದ್ದೇಶವಾಗಿದೆ. ಮಾನವೀಯತೆ ಇದ್ದಾಗ ಸೇವಾ ಮನೋಭಾವನೆ ಮೂಡಲು ಸಾಧ್ಯವಿದೆ. ಅಶಕ್ತರ ಸೇವೆಯಲ್ಲಿ ದೇವರನ್ನು ಕಾಣಬಹುದು ಎಂಬ ನಿಟ್ಟಿನಲ್ಲಿ ಟ್ರಸ್ಟ್ ಈ ಸೇವಾ ಕಾರ್ಯ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬಳಿಕ ೧೮ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. ಫಲಾನುಭವಿಗಳಾದ ಸಾಧು ನಾಯ್ಕ ಹಾಗೂ ರಮ್ಯಾ ಅನಿಸಿಕೆ ವ್ಯಕ್ತಪಡಿಸಿದರು.
ಸೌಜನ್ಯ ಬಿ.ಎಂ ಕೆಯ್ಯೂರು ಸ್ವಾಗತಿಸಿದರು. ಲಕ್ಷ್ಮಣ ವಂದಿಸಿದರು. ರಂಗಕರ್ಮಿ ಕೃಷ್ಣಪ್ಪ ಬಂಬಿಲ ಕಾರ್ಯಕ್ರಮ ನಿರ್ವಹಿಸಿದರು.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123