ಸ್ಥಳೀಯ

ಅಶಕ್ತರಿಗೆ ನೆರವಾಗುವ ಶ್ರೀನಿಧಿ ಸೇವಾ ಟ್ರಸ್ಟ್ನ ಕಾರ್ಯ ಅಭಿನಂದನಾರ್ಹ : ನಿರ್ಮಲ್ ಕುಮಾರ್ ಜೈನ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜನಸೇವೆಯೇ ಜನಾರ್ಧನ ಸೇವೆಯಾಗಿದ್ದು, ನಿಸ್ವಾರ್ಥ ಸೇವೆಯ ರೂಪದಲ್ಲಿ ಭಗವಂತನನ್ನು ಕಾಣಬಹುದು. ಅಶಕ್ತರಿಗೆ ನೆರವಾಗುತ್ತಿರುವ ಶ್ರೀನಿಧಿ ಸೇವಾ ಟ್ರಸ್ಟಿನ ಕಾರ್ಯ ಅಭಿನಂದನಾರ್ಹವಾಗಿದೆ ಎಂದು ವಕೀಲ ನಿರ್ಮಲ್ ಕುಮಾರ್ ಜೈನ್ ಹೇಳಿದರು.
ಅವರು ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪುತ್ತೂರಿನ ಶ್ರೀನಿಧಿ ಸೇವಾ ಟ್ರಸ್ಟ್ (ರಿ.) ನಡೆಸಿಕೊಂಡು ಬರುತ್ತಿರುವ ಅಶಕ್ತರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪದ್ಮಲತಾ ಮಾತನಾಡಿ ಟ್ರಸ್ಟಿನ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿ, ಟ್ರಸ್ಟಿನ ಸಹಾಯಾರ್ಥವನ್ನು ಸದುಪಯೋಗ ಮಾಡಿಕೊಳ್ಳುವಂತೆ ಫಲಾನುಭವಿಗಳಿಗೆ ತಿಳಿಸಿದರು.
ಟ್ರಸ್ಟ್ನ ಅಧ್ಯಕ್ಷೆ ಉಷಾ ಕಾವು ಮಾತನಾಡಿ ಪರಸ್ಪರ ಸಹಾಯವೇ ಟ್ರಸ್ಟಿನ ಉದ್ದೇಶವಾಗಿದೆ. ಮಾನವೀಯತೆ ಇದ್ದಾಗ ಸೇವಾ ಮನೋಭಾವನೆ ಮೂಡಲು ಸಾಧ್ಯವಿದೆ. ಅಶಕ್ತರ ಸೇವೆಯಲ್ಲಿ ದೇವರನ್ನು ಕಾಣಬಹುದು ಎಂಬ ನಿಟ್ಟಿನಲ್ಲಿ ಟ್ರಸ್ಟ್ ಈ ಸೇವಾ ಕಾರ್ಯ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬಳಿಕ ೧೮ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. ಫಲಾನುಭವಿಗಳಾದ ಸಾಧು ನಾಯ್ಕ ಹಾಗೂ ರಮ್ಯಾ ಅನಿಸಿಕೆ ವ್ಯಕ್ತಪಡಿಸಿದರು.
ಸೌಜನ್ಯ ಬಿ.ಎಂ ಕೆಯ್ಯೂರು ಸ್ವಾಗತಿಸಿದರು. ಲಕ್ಷ್ಮಣ ವಂದಿಸಿದರು. ರಂಗಕರ್ಮಿ ಕೃಷ್ಣಪ್ಪ ಬಂಬಿಲ ಕಾರ್ಯಕ್ರಮ ನಿರ್ವಹಿಸಿದರು.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 125