Gl
ರಾಜ್ಯ ವಾರ್ತೆಸ್ಥಳೀಯ

ಪೆನ್‌ಡ್ರೈವ್ ಕೇಸ್‌; ಅಶ್ಲೀಲ ವಿಡಿಯೋ ಬಗ್ಗೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಡ್ರೈವರ್‌ ಕಾರ್ತಿಕ್

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ ಪೆನ್‌ ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಪೆನ್‌ ಡ್ರೈವ್‌ನಿಂದ ಲೀಕ್‌ ಆದ ವಿಡಿಯೋಗಳ ಮೂಲ ಎನ್ನಲಾದ ಡ್ರೈವರ್‌ ಕಾರ್ತಿಕ್‌ರ ವಿಡಿಯೋ ಹೊರಬಿದ್ದಿದೆ. ರೆಕಾರ್ಡ್‌ ಮಾಡಲಾದ ವಿಡಿಯೋ ಹೇಳಿಕೆಯಲ್ಲಿ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇಡೀ ಪ್ರಕರಣದಲ್ಲಿ ವಿಡಿಯೋ ಲೀಕ್‌ ಹೇಗಾಯ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ತಿಕ್‌ ಮಾತನಾಡಿದ್ದಾರೆ.

rachana_rai
Pashupathi
akshaya college
Balakrishna-gowda

ಯಾವುದೋ ಅಜ್ಞಾತ ಸ್ಥಳದಲ್ಲಿ ಸೆರೆ ಹಿಡಿಯಲಾದಂತಿರುವ ವಿಡಿಯೋದಲ್ಲಿ ಕಾರ್ತಿಕ್‌, ತಮಗೆ ನ್ಯಾಯ ಸಿಗುವ ಕಾರಣಕ್ಕೆ ಪೆನ್‌ ಡ್ರೈವ್‌ ವಿಡಿಯೋ ,ಫೋಟೋಗಳ ಕಾಪಿಯೊಂದನ್ನ ದೇವರಾಜ ಗೌಡರರಿಗೆ ನೀಡಿದ್ದೇನೆ. ಅವರು ವಕಾಲತ್ತು ವಹಿಸಿಕೊಂಡ ಕಾರಣಕ್ಕೆ ಅವರಿಗೆ ಕೊಟ್ಟಿದ್ದೆ ಹೊರತು ಮತ್ಯಾರಿಗೂ ಕೊಟ್ಟಿಲ್ಲ ಎಂದಿದ್ದಾರೆ.

pashupathi

ತಾವು ಕೊಟ್ಟ ವಿಡಿಯೋಗಳನ್ನು ಅವರು ಹೇಗೆ ಬಳಸಿಕೊಂಡರು? ಅಥವಾ ಅದನ್ಯಾರಿಗಾದರೂ ಹಂಚಿದರೇ ಎಂಬ ವಿಚಾರಗಳು ತಮಗೆ ಗೊತ್ತಿಲ್ಲ. ಇದರಲ್ಲಿ ಕಾಂಗ್ರೆಸ್‌ ನಾಯಕರ ಪಾತ್ರಗಳಿಲ್ಲ. ಕಾಂಗ್ರೆಸ್‌ನವರು ನನಗೆ ಅನ್ಯಾಯವಾದಾಗಲೂ ನನ್ನ ನೆರವಿಗೆ ಬಂದಿಲ್ಲ. ಅವರಿಗೆ ನಾನ್ಯಾಕೆ ವಿಡಿಯೋ ಕಾಪಿ ಕೊಡಲಿ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಈ ಎಲ್ಲಾ ವಿಚಾರಗಳನ್ನು ಎಸ್‌ಐಟಿ ಮುಂದೆ ಹಾಜರಾಗಿ ವಿವರ ನೀಡುವುದಾಗಿ ಕಾರ್ತಿಕ್‌ ತಿಳಿಸಿದ್ದು, ಆನಂತರ ಮಾಧ್ಯಮಗಳ ಎದುರು ಬಂದು ಮಾತನಾಡುತ್ತೇನೆ ಎಂದಿದ್ದಾರೆ.

ಯಾರು ಈ ಕಾರ್ತಿಕ್?‌
ಸದ್ಯ ಹೊರಬಿದ್ದಿರುವ ಹಾಸನ ಪೆನ್‌ ಡ್ರೈವ್‌ ವಿಡಿಯೋ ಲಿಂಕ್‌ Hasan pen drive video link ಕೇಸ್‌ನಲ್ಲಿ ಕಾರ್ತಿಕ್‌ ರಿಂದ ಎಲ್ಲಾ ದೃಶ್ಯಗಳು ಹೊರಬಿದ್ದಿರುವ ಬಗ್ಗೆ ಮಾಹಿತಿ ಹೊರಬಂದಿತ್ತು. ಪ್ರಜ್ವಲ್‌ ರೇವಣ್ಣರ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್‌ ಕಳೆದ ವರ್ಷ ರೇವಣ್ಣರ ಕುಟುಂಬದ ಜೊತೆಗೆ ವೈಮನಸ್ಯ ಹೊಂದಿದ್ದರು. ರೇವಣ್ಣರ ಕುಟುಂಬ ತಮ್ಮ ಭೂಮಿಯನ್ನು ಕಿತ್ತುಕೊಂಡು ಟಾರ್ಚರ್‌ ಕೊಟ್ಟಿದೆ ಅಂತಾ ಪೊಲೀಸ್‌ ಸ್ಟೇಷನ್‌ ಮೆಟ್ಟಿಲೇರಿದ್ದರು. ಆನಂತರ ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಮೆಟ್ಟಿಲೇರಲು ಮುಂದಾಗಿದ್ದರು. ಇದೇ ಹೊತ್ತಿನಲ್ಲಿ ರೇವಣ್ಣರ ಕುಟುಂಬ ಕೋರ್ಟ್‌ನಿಂದ ವಿಡಿಯೋ ಹರಿದಾಡದಂತೆ ಸ್ಟೇ ತಂದಿತ್ತು. ಈ ಎಲ್ಲಾ ವಿಚಾರ ಹಂಚಿಕೊಂಡಿರುವ ಕಾರ್ತಿಕ್‌ ಇದೀಗ ಎಸ್‌ಐಟಿ ಮುಂದೆ ಹೋಗಲು ನಿರ್ಧರಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

1 of 121