ಸ್ಥಳೀಯ

ಚುನಾವಣೆ ಬಳಿಕದ ನೀತಿ ಸಂಹಿತೆ: ಸಹಾಯಕ ಆಯುಕ್ತರು ಏನಂದ್ರು?

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚುನಾವಣೋತ್ತರ ನೀತಿ ಸಂಹಿತೆ ಎಂದಿನಂತೆ ಇದ್ದರೂ, ಕೆಲ ವಿಚಾರಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.

ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

core technologies

ಚುನಾವಣೆ ಶಾಂತಿಯುತವಾಗಿ ಮುಗಿದಿದೆ. ಮುಂದೆ ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಅಲ್ಲಿವರೆಗೂ ಅಥವಾ ಚುನಾವಣಾ ಆಯೋಗದ ನೊಟೀಸ್ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿಕೊಂಡರು.

akshaya college

ಖಾಸಗಿ ಕಾರ್ಯಕ್ರಮಗಳಾದ ಮದುವೆ ಅಥವಾ ಇನ್ನಾವುದೇ ಸಮಾರಂಭಗಳಿಗೆ ಅನುಮತಿ ಪಡೆದುಕೊಳ್ಳುವ ಅಗತ್ಯವಿಲ್ಲ. ಆದರೆ ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾಹಿತಿ ನೀಡಬೇಕು. ಸಮಾರಂಭದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ ಎಂಬುದನ್ನು ದೃಢಪಡಿಸಬೇಕು. ಇನ್ನೂ ಇತರ ಅನುಮತಿಗಳಾದ ಮೈಕ್ ಪರ್ಮೀಷನ್, ಪೊಲೀಸ್ ಮಾಹಿತಿಯನ್ನು ಮೊದಲಿನಂತೆ ಪಾಲಿಸಬೇಕಾಗಿದೆ ಎಂದರು.

ತಹಸೀಲ್ದಾರ್ ಕುಂಞಿ ಅಹಮ್ಮದ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 117