ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವರ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಸಹಾಯಧನ ನೀಡಲಾಯಿತು.
ಕುಂಬ್ರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ಡಾ| ವಿಘ್ನೇಶ್ ಅವರು ಇತ್ತೀಚೆಗೆ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ಪುತ್ತಿಲ ಪರಿವಾರ ಸೇವಾಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅದ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಟ್ರಸ್ಟ್ ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲ್, ಚಂದಪ್ಪ ಮೂಲ್ಯ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಪ್ರೇಮ್ ರಾಜ್ ಆರ್ಲಪದವು, ರಾಜು ಶೆಟ್ಟಿ, ರೂಪೇಶ್, ಸುನಿಲ್ ಬೋರ್ಕರ್, ಅನಿಲ್ ತೆಂಕಿಲ, ಹರೀಶ್ ಭಟ್ ಪುಣಚ, ಸುಜಿತ್ ಕಜೆ ಮುಂತಾದವರು ಉಪಸ್ಥಿತರಿದ್ದರು.






















