ಸ್ಥಳೀಯ

ಶಕ್ತಿ ನ್ಯೂಸ್ ವರದಿ ಫಲಶ್ರುತಿ – ಸ್ಪಂದಿಸಿದ ಪೆರಾಬೆ ಗ್ರಾಮ ಪಂಚಾಯತ್

ಈ ಸುದ್ದಿಯನ್ನು ಶೇರ್ ಮಾಡಿ

ವಾಣಿಜ್ಯ ಸಂಕೀರ್ಣದ ಮುಂಭಾಗ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ತೆರವು ಮಾಡುವ ಮೂಲಕ ಪೆರಾಬೆ ಗ್ರಾಮ ಪಂಚಾಯತ್, ಶಕ್ತಿ ನ್ಯೂಸ್ ಮಾಡಿದ್ದ ವರದಿಗೆ ಸ್ಪಂದಿಸಿದೆ.

maithri

ವಾಣಿಜ್ಯ ಸಂಕೀರ್ಣದ ಮಾಲಕರ ಆಕ್ಷೇಪದ ಹೊರತಾಗಿಯೂ ಜೂನ್ 2ರಂದು ಕುಂತೂರು ಕೆಳಗಿನಪೇಟೆಯ ವಾಣಿಜ್ಯ ಸಂಕೀರ್ಣವೊಂದರ ಮುಂಭಾಗದಲ್ಲಿ ಶುಭಾಶಯದ ಬ್ಯಾನರನ್ನು ಅಳವಡಿಸಲಾಗಿತ್ತು. ಈ ಬಗ್ಗೆ ಜೂನ್ 3ರಂದು ವಾಣಿಜ್ಯ ಸಂಕೀರ್ಣಕ್ಕೆ ಸಂಬಂಧಪಟ್ಟವರು ಪೆರಾಬೆ ಗ್ರಾಮ ಪಂಚಾಯತ್ ಪಿಡಿಓ ಅವರಿಗೆ ದೂರು ನೀಡಿದ್ದರು. ಸ್ಪಂದಿಸಿದ ಪಿಡಿಓ ಅವರು, ಒಂದು ವಾರಗಳ ಬಳಿಕ ಬ್ಯಾನರ್ ತೆರವು ಮಾಡುವ ಭರವಸೆ ನೀಡಿದ್ದರು.

ಆದರೆ ವಾರ ಬಿಟ್ಟು 10 ದಿನ ಕಳೆದರೂ ಬ್ಯಾನರ್ ತೆರವು ಮಾಡುವ ಸೂಚನೆ ಸಿಗದೇ ಇದ್ದಾಗ, ಕಡಬ ತಾಲೂಕು ಪಂಚಾಯತ್ ಕದವನ್ನು ತಟ್ಟಿದ್ದರು. ಆದರೆ ಪರಿಹಾರ ಶೂನ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಶಕ್ತಿ ನ್ಯೂಸ್ ವರದಿ ಮಾಡಿತ್ತು. ವರದಿಗೆ ಸ್ಪಂದಿಸಿದ ಪೆರಾಬೆ ಗ್ರಾಮ ಪಂಚಾಯತ್ ಪಿಡಿಓ ಅವರು ತಕ್ಷಣದಲ್ಲೇ ತೆರವು ಮಾಡಿಸಲಾಗುವುದು ಎಂದು ತಿಳಿಸಿದ್ದರು. ಅದರಂತೆ ಶುಕ್ರವಾರ ರಾತ್ರಿಯೇ ಬ್ಯಾನರ್ ತೆರವು ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124