ರಾಜ್ಯ ವಾರ್ತೆಸ್ಥಳೀಯ

ಹೆಚ್ ಡಿ ರೇವಣ್ಣರನ್ನು ಬಂಧಿಸಿದ ಎಸ್ಐಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಮಹಿಳೆ ಅಪಹರಣದ ಪ್ರಕರಣವೊಂದರಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ (SIT) ಬಂಧಿಸಿ ವಿಚಾರಣೆಗಾಗಿ ತನ್ನ ಕಚೇರಿಗೆ ಕರೆದೊಯ್ದಿದೆ.

ಬೆಳಗ್ಗೆ ಹೊಳೆನರಸೀಪುರದ ತಮ್ಮ ಮನೆಯಲ್ಲಿದ್ದ ರೇವಣ್ಣ ಸಾಯಂಕಾಲದ ಹೊತ್ತಿಗೆ ನಗರದ ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಹೆಚ್ ಡಿ ದೇವೇಗೌಡರ ಮನೆಗೆ ಬಂದಿದ್ದರು. ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣರ ನಿರೀಕ್ಷಣಾ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ಕೂಡಲೇ ಎಸ್ಐಟಿ ಅಧಿಕಾರಿಗಳು, ರೇವಣ್ಣ ಮಾಜಿ ಪ್ರಧಾನಿಯವರ ಮನೆಯಲ್ಲಿರುವ ಮಾಹಿತಿ ಪಡೆದು ಅವರನ್ನು ತಮ್ಮ ವಶಕ್ಕೆ ಪಡೆದರು.

ಅಧಿಕಾರಿಗಳು ರೇವಣ್ಣರನ್ನು ಬೆಂಗಳೂರು ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿ ಕಾರ್ಲಟನ್‌ ಭವನಕ್ಕೆ ಕರೆದೊಯ್ದರು. ಇಲ್ಲಿರುವ ಸಿಐಡಿ ಕಚೇರಿಯಲ್ಲೇ ಎಸ್ಐಟಿ ಕಚೇರಿ ಇದೆ. ಭವನದ ಸುತ್ತ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಯುವ ನ್ಯಾಯವಾದಿಗಳಿಗೆ ಐಎಎಸ್–ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ವಕೀಲರ ಸಂಘ ಪುತ್ತೂರು ಇವರ…

1 of 150