ದಾರಂದಕುಕ್ಕು ನಿವಾಸಿ ಜಯಂತಿ (ದಿ. ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ ಪರಿಸ್ಥಿತಿಯನ್ನು ಮನಗಂಡು ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ₹10,000 ಧನಸಹಾಯವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಲಾಯಿತು.
ಕಳೆದ ತಿಂಗಳು ಪತಿಯನ್ನು ಕಳೆದುಕೊಂಡಿದ್ದ ಜಯಂತಿ ಅವರು ಇತ್ತೀಚೆಗೆ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಕಾಲು ಮುರಿದು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರ್ಥಿಕ ಸಂಕಷ್ಟವನ್ನು ಅರಿತು ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳು ಹಾಗೂ ಸದಸ್ಯರು ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ ಪುತ್ತೂರು ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಸಮಾಜದ ಬಡ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮುಂದೆಯೂ ಇದೇ ರೀತಿಯ ನೆರವು ನೀಡುವ ಕಾರ್ಯವನ್ನು ಬಿಲ್ಲವ ಬ್ರಿಗೇಡ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು.
ಧನಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಲ್ಲವ ಬ್ರಿಗೇಡ್ ಪುತ್ತೂರಿನ ಪ್ರಧಾನ ಕಾರ್ಯದರ್ಶಿ ರಂಜಿತ್ ಸುವರ್ಣ, ಉಪಾಧ್ಯಕ್ಷ ಅಣ್ಣಿ ಪೂಜಾರಿ, ಕೋಶಾಧಿಕಾರಿ ಚಂದ್ರಶೇಖರ ಕಲ್ಲಗುಡ್ಡೆ, ಸದಸ್ಯ ವಿನಯ ಸುವರ್ಣ ಉಪಸ್ಥಿತರಿದ್ದರು.






















