tamanvi
ಸ್ಥಳೀಯ

ಅಪಾಯಕಾರಿ ಸ್ಥಿತಿಯಲ್ಲಿದ್ದ ರಸ್ತೆ ಬದಿಯ ಮರ: ತಹಸೀಲ್ದಾರ್ ಭೇಟಿ ಬಳಿಕ ತೆರವು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯದಿಂದ ದೇವಸ್ಯ ಸಂಪರ್ಕಿಸುವ ಮೇರ್ಲ ರಸ್ತೆ ಬದಿಯ ಮರವೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಹಸೀಲ್ದಾರ್ ಎಸ್.ಬಿ. ಕೂಡಲಗಿ ಭೇಟಿ ಬಳಿಕ ಮರ ತೆರವುಗೊಳಿಸಲಾಯಿತು.

maithri

ರಸ್ತೆ ಬದಿಯಲ್ಲೇ ಇರುವ ಈ ಮರದ ಬುಡ ಕುಸಿಯುತ್ತಾ ಇದೆ. ಯಾವುದೇ ಕ್ಷಣದಲ್ಲೂ ಮರ ರಸ್ತೆಗಡ್ಡವಾಗಿ ಬಿದ್ದು ಬಿಡುವ ಅಪಾಯವಿದೆ. ಒಳರಸ್ತೆಯಾದರೂ ದಿನಂಪ್ರತಿ ಶಾಲಾ ವಾಹನ ಸೇರಿದಂತೆ ಹಲವಾರು ಸಾರ್ವಜನಿಕರು ಓಡಾಡುವ ರಸ್ತೆಯಿದು. ಹಾಗಾಗಿ ತಕ್ಷಣದಲ್ಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಮಾಜಿ ಸದಸ್ಯ ಪವಿತ್ರ ರೈ ಸ್ಥಳದಲ್ಲಿ ಉಪಸ್ಥಿತರಿದ್ದು, ತಹಸೀಲ್ದಾರಿಗೆ ಮಾಹಿತಿ ನೀಡಿದರು.

ಭಾನುವಾರ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟವರಿಗೆ ಮರ ತೆರವು ಮಾಡಲು ಸೂಚನೆ ನೀಡಿದರು. ಅದರಂತೆ ಭಾನುವಾರವೇ ಮರ ತೆರವು ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125