tamanvi
ಕರಾವಳಿಸ್ಥಳೀಯ

ಲಕ್ಷಾಂತರ ರೂಪಾಯಿ ಮೌಲ್ಯದ ನಗ – ನಗದು ಕಳ್ಳತನ

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು, ಕುದ್ಯಾಡಿ ಗ್ರಾಮದ ಪಿಲ್ಯ ಎಂಬಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

ಪಿಲ್ಯ ನಿವಾಸಿ ನೀತಾ (34) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ.

ನೀತಾ ಅವರು ಮೇ 11 ರಂದು ಮನೆಗೆ ಬಾಗಿಲು ಹಾಕಿ ತವರು ಮನೆಗೆ ಹೋಗಿದ್ದು, ಮೇ 13 ರ ಮಧ್ಯಾಹ್ನ ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯವರು ನೀಡಿ ಮಾಹಿತಿಯಂತೆ ಮನೆಗೆ ಬಂದು ಪರಿಶೀಲನೆ ನಡೆಸಿದಾಗ ಮನೆಯ ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಗೋಡ್ರೆಜ್ ಬೀಗ ಮುರಿದು ಅದರಲ್ಲಿದ್ದ 1.98 ಲಕ್ಷ ರೂಪಾಯಿ ಮೌಲ್ಯದ 33 ಗ್ರಾಂ ಚಿನ್ನಾಭರಣ ಹಾಗೂ 40 ಸಾವಿರ ರೂಪಾಯಿ ನಗದು ಹಣ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಕಳವಾಗಿರುವ ನಗ-ನಗದಿನ ಒಟ್ಟು ಮೌಲ್ಯ 2.38 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2024 ಕಲಂ : 454,457,380 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 183