tamanvi
ಸ್ಥಳೀಯ

ಶಾಲಾ ಅಡುಗೆ ಸಿಬ್ಬಂದಿಯ ಪ್ರಾಣ ಉಳಿಸಿದ ವಿದ್ಯಾರ್ಥಿ: ಮನ್ವಿತ್ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರು ಅಪಾಯದಿಂದ ಪಾರಾದ ಘಟನೆ ನಡೆದಿದೆ.

maithri

ಶಾಲೆಯಲ್ಲಿ ಅಡುಗೆ ಸಿಬ್ಬಂದಿಯೊಬ್ಬರು ವಿದ್ಯುತ್ ಚಾಲಿತ ಯಂತ್ರದಲ್ಲಿ ತೆಂಗಿನಕಾಯಿ ತುರಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಕೈಬೆರಳು ಯಂತ್ರದೊಳಗೆ ಸಿಲುಕಿಕೊಂಡಿತು. ನೋವಿನಿಂದ ಅವರು ಕಿರುಚಾಡುತ್ತಿದ್ದಾಗ, ಅಲ್ಲಿದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ತಕ್ಷಣ ನೆರವಿಗೆ ಧಾವಿಸಿದ್ದಾನೆ.

ಯಂತ್ರದ ವಿದ್ಯುತ್ ಸಂಪರ್ಕವನ್ನು ಕೂಡಲೇ ಕಡಿತಗೊಳಿಸುವ ಮೂಲಕ ಮನ್ವಿತ್ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾನೆ. ಬಾಲಕನ ಸಮಯಪ್ರಜ್ಞೆಯಿಂದ ಅಡುಗೆ ಸಿಬ್ಬಂದಿಗೆ ಹೆಚ್ಚಿನ ಅಪಾಯ ಎದುರಾಗುವುದು ತಪ್ಪಿದೆ.

ಮನ್ವಿತ್‌ನ ಧೈರ್ಯ ಹಾಗೂ ಮಾನವೀಯ ಕಾಳಜಿಗೆ ಶಿಕ್ಷಕರು, ಶಾಲಾ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಮನ್ವಿತ್‌ನ ಕಾರ್ಯವನ್ನು ಶ್ಲಾಘಿಸಿದ್ದಾರೆ.

“ಮನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯ ನಿಜಕ್ಕೂ ಹೃದಯಸ್ಪರ್ಶಿ ಮತ್ತು ಶ್ಲಾಘನೀಯ. ಅಡುಗೆ ಸಿಬ್ಬಂದಿಯನ್ನು ಅಪಾಯದಿಂದ ಕಾಪಾಡಿದ ಮನ್ವಿತ್‌ಗೆ ಹೃದಯಪೂರ್ವಕ ಅಭಿನಂದನೆಗಳು,” ಎಂದು ಸಿಎಂ ತಿಳಿಸಿದ್ದಾರೆ.

ಬಾಲಕನ ಒಂದು ಕ್ಷಣದ ಜಾಗರೂಕತೆ ಹಾಗೂ ಸರಿಯಾದ ನಿರ್ಧಾರ ಅಡುಗೆ ಸಿಬ್ಬಂದಿಗೆ ಸಂಭವಿಸಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಿದೆ. ಮನ್ವಿತ್‌ನ ಮಾನವೀಯ ಕಾಳಜಿ, ಧೈರ್ಯ ಮತ್ತು ಸಮಯಪ್ರಜ್ಞೆ ಎಲ್ಲರಿಗೂ ಮಾದರಿಯಾಗಲಿ. ಆತ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಬೆಳೆದು ನಾಡಿಗೆ ಕೀರ್ತಿ ತರಲಿ ಎಂದು ಸಿಎಂ ಹಾರೈಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 128