ಸ್ಥಳೀಯ

ಕೇರಳದಲ್ಲಿ ಹೆಚ್ಚುತ್ತಿದೆ ವೆಸ್ಟ್ ನೈಲ್ ಜ್ವರ, ಕರ್ನಾಟಕದಲ್ಲಿ ಆತಂಕ! ಏನಿದು ವೆಸ್ಟ್ ನೈಲ್? ರೋಗದ ಲಕ್ಷಣಗಳೇನು? ಚಿಕಿತ್ಸೆ ಹೇಗೆ?

tv clinic

ಈ ಸುದ್ದಿಯನ್ನು ಶೇರ್ ಮಾಡಿ

ನೆರೆಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದ್ದು, ಆ ರಾಜ್ಯದ ಜತೆ ಗಡಿ ಹಂಚಿಕೊಂಡಿರುವ ಭಾಗಗಳಲ್ಲಿ ಆತಂಕ ಹೆಚ್ಚಾಗಿದೆ.

core technologies

ಈ ಹಿಂದೆ ಕೋವಿಡ್, ಹಂದಿಜ್ವರ, ನಿಫಾ ವೈರಸ್ ಕೇರಳದಲ್ಲಿ ಕಾಣಿಸಿಕೊಂಡು ಅಲ್ಲಿಂದ ರಾಜ್ಯಕ್ಕೂ ಹರಡಿತ್ತು. ಹೀಗಾಗಿ ಕೇರಳಕ್ಕೆ ಭೇಟಿ ನೀಡಿ ರಾಜ್ಯಕ್ಕೆ ವಾಪಸ್ಸಾಗುವವರ ಬಗ್ಗೆ ನಿಗಾ ಇಡಲಾಗುತ್ತಿತ್ತು. ವೆಸ್ಟ್ ನೈಲ್ ಜ್ವರದ ಬಗ್ಗೆ ಮೈಸೂರು ಜಿಲ್ಲೆಯ ಎಚ್ಡಿ ಕೋಟೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಗ್ರಾಮಗಳಿಗೆ ಭೇಟಿ ನೀಡಿ ಜನ ಜಾಗೃತಿ ಮೂಡಿಸುತ್ತಿದ್ದಾರೆ.

akshaya college

ಏನಿದು ವೆಸ್ಟ್ ನೈಲ್ ಜ್ವರ?
ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರವು ನೀಡಿರುವ ಮಾಹಿತಿಯ ಪ್ರಕಾರ ವೆಸ್ಟ್ ನೈಲ್ ಜ್ವರ ಎಂದರೆ, ಸೊಳ್ಳೆಗಳ ಕಡಿತದ ಮೂಲಕ ಹರಡುವ ವೈರಸ್ ಸೋಂಕಾಗಿದೆ. ಸೋಂಕು ಹರಡುವಿಕೆ ಸಾಮಾನ್ಯವಾಗಿ ಬೇಸಿಗೆ ಮಳೆಯ ಸಂದರ್ಭದಲ್ಲಿ ಮತ್ತು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ.

ವೆಸ್ಟ್ ನೈಲ್ ಸೋಂಕಿನ ಲಕ್ಷಣಗಳೇನು?
ಅಧಿಕ ಜ್ವರ, ತಲೆನೋವು, ಕುತ್ತಿಗೆ ಬಿಗಿತ, ನಡುಕ, ಸೆಳೆತ, ಸ್ನಾಯು ದೌರ್ಬಲ್ಯ, ದೃಷ್ಟಿ ನಷ್ಟ, ನರಗಳಲ್ಲಿ ಮರಗಟ್ಟುವಿಕೆ ಅನುಭವವಾಗುವುದು ವೆಸ್ಟ್ ನೈಲ್ ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ಕೆಲವೊಂದು ಸಂದರ್ಭಗಳಲ್ಲಿ ಸೋಂಕಿತರು ಕೋಮಾಗೆ ಜಾರುವ ಅಥವಾ ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯವೂ ಇದೆ. ಹೆಚ್ಚಿನ ಸೋಂಕಿತರಲ್ಲಿ ಕೆಲವೊಮ್ಮೆ ರೋಗ ಲಕ್ಷಣಗಳು ಕಂಡುಬರದೇ ಇರುವ ಸಾಧ್ಯತೆಯೂ ಇದೆ.

ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳುವುದೇ ಸೋಂಕು ತಡೆಗೆ ಇರುವ ಪ್ರಮುಖ ಮಾರ್ಗೋಪಾಯವಾಗಿದೆ. ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗದಂತೆ ನೋಡಿಕೊಳ್ಳುವುದು, ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಮೂಲಕ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದು.

ಚಿಕಿತ್ಸೆ ಏನು?
ವೆಸ್ಟ್ ನೈಲ್ ಸೋಂಕಿಗೆ ಪ್ರತ್ಯೇಕ ಚಿಕಿತ್ಸೆ ಎಂದು ಇಲ್ಲ. ಇತರ ವೈರಸ್ ಸೋಂಕುಗಳಿಗೆ ನೀಡುವಂತೆ ರೋಗದ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ಅನಿವಾರ್ಯ ಸಂದರ್ಭಗಳಲ್ಲಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕಾಗುತ್ತದೆ ಎಂದು ತಜ್ಞ ವೈದ್ಯರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118