ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವ ಬ್ರಾಹ್ಮಣ ಸೇವಾ ಸಂಘ ಬೊಳುವಾರು, ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಕರ್ಮ ಮಹಿಳಾ ಮಂಡಳಿ ಬೊಳುವಾರು, ಪುತ್ತೂರು ಇವರ ಸಹಯೋಗದಲ್ಲಿ ಚಿನ್ನಾಭರಣ ಕ್ಷೇತ್ರಕ್ಕೆ ಸಂಬಂಧಿಸಿದ ವಿಶೇಷ ಕಾರ್ಯಾಗಾರ ಆ.29ರಂದು ಪುತ್ತೂರಿನಲ್ಲಿ ನಡೆಯಲಿದೆ.
ಇವುಗಳ ಸಹಯೋಗದಲ್ಲಿ ಇಲೆಕ್ಟ್ರಿಕ್ ಚಿನ್ನ, ಬೆಳ್ಳಿ ತೂಕ ಮಾಡುವ ಯಂತ್ರಕ್ಕೆ ಮೊಹರು (ಸೀಲ್) ಹಾಕುವ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಚಿನ್ನಾಭರಣ ತಯಾರಿಕೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳು ಹಾಗೂ ಆಸಕ್ತರಿಗೆ ಈ ಕಾರ್ಯಾಗಾರ ಉಪಯುಕ್ತವಾಗಲಿದೆ.
ಆ.29ರಂದು ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಪುತ್ತೂರಿನ ವಿಶ್ವಕರ್ಮ ಸಭಾಭವನದಲ್ಲಿ ಕಾರ್ಯಾಗಾರ ನಡೆಯಲಿದೆ. ಚಿನ್ನಾಭರಣ ತಯಾರಿಕೆಯಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆ ಹಾಗೂ ಸಂಬಂಧಿತ ತಾಂತ್ರಿಕ ಮಾಹಿತಿಯನ್ನು ಕಾರ್ಯಾಗಾರದಲ್ಲಿ ನೀಡಲಾಗುತ್ತದೆ.
ಚಿನ್ನದ ಕೆಲಸಗಾರರು, ವಿಶ್ವಕರ್ಮ ಸಮುದಾಯದವರು ಹಾಗೂ ಈ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

































