ಪುತ್ತೂರು: ದರ್ಬೆ ಗಲಾಟೆಗೆ ಸಂಬಂಧಪಟ್ಟಂತೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಆ 31ರಂದು ಪುತ್ತೂರು ಚಲೋ ಹಮ್ಮಿಕೊಂಡಿದ್ದೇವೆ ಎಂದು ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಬೆ ಐಬಿಯ ಬಳಿಯಿಂದ ಬೆಳಿಗ್ಗೆ 10ಕ್ಕೆ ಚಲೋ ಹೊರಟು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುವ ಮೂಲಕ ಪುತ್ತೂರು ಚಲೋ ಸಮಾಪನಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಬಜರಂಗದಳ ಪುತ್ತೂರು ಜಿಲ್ಲಾ ಸಹಸಂಯೋಜಕ್ ಪ್ರವೀಣ್ ಕಲ್ಲೇಗ, ಪುತ್ತೂರು ನಗರ ಸಹಸಂಯೋಜಕ್ ರೂಪೇಶ್ ಬಲ್ನಾಡ್, ವಿಹಿಂಪ ಜಿಲ್ಲಾ ಸಹಕಾರ್ಯದರ್ಶಿ ಶ್ರೀಧರ್ ತೆಂಕಿಲ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ದಯಾನಂದ್ ಅಂಬುಲ ಉಪಸ್ಥಿತರಿದ್ದರು.


































