Gl
ಕರಾವಳಿಸ್ಥಳೀಯ

ಮೀನುಗಾರಿಕಾ ಬೋಟ್’ಗೆ ಮತ್ತೊಂದು ಬೋಟ್ ಡಿಕ್ಕಿ: ಲಕ್ಷಾಂತರ ರೂ. ಮೌಲ್ಯದ ಸೊತ್ತು ಸಮುದ್ರಪಾಲು!!

ಈ ಸುದ್ದಿಯನ್ನು ಶೇರ್ ಮಾಡಿ

ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

Pashupathi

ಮಲ್ಪೆ ವಡಭಂಡೇಶ್ವರ ಗೋಪಾಲ ಸುವರ್ಣ ಎಂಬವರ ಮಾಲ್ತಿದೇವಿ ಬೋಟು ಮೇ 16ರಂದು ರಾತ್ರಿ ಮಲ್ಪೆಬಂದರಿನಿಂದ ಮೀನುಗಾರಿಕೆಗಾಗಿ ಭಟ್ಕಳ ಕಡೆಗೆ ತೆರಳಿತ್ತು. ಇದರಲ್ಲಿ ತಾಂಡೇಲ ಸುರೇಶ್ ಕುಂದರ್, ಮೀನುಗಾರರಾದ ಶಂಕರ ಕುಂದರ್, ಶಂಕರ ಪೂಜಾರಿ, ಯೋಗೇಂದ್ರ, ಫರೀದ ಅಬ್ದುಲ್ ಘನಿ ಶೇಖ್ ಇದ್ದರು.

akshaya college

ಮೇ 17ರಂದು ಬೆಳಗಿನ ಜಾವ ಭಟ್ಕಳ ಸಮೀಪ ಸುಮಾರು 12 ಮಾರು ದೂರದಲ್ಲಿ ಹೋಗುತ್ತಿದ್ದ ಬೋಟಿಗೆ ಶ್ರೀದುರ್ಗಾ ಬೋಟು ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಮಾಲ್ತಿದೇವಿ ಬೊಟಿನ ಮಧ್ಯ ಭಾಗದ ಅಡಿ ಹಲಗೆಯು ಎದ್ದು ಹೋಗಿದ್ದು, ನೀರು ಒಳಗೆ ಬರಲು ಆರಂಭಿಸಿತು.

ಢಿಕ್ಕಿ ಹೊಡೆದ ದುರ್ಗಾ ಬೋಟು ಮತ್ತು ಹತ್ತಿರದಲ್ಲೇ ಇದ್ದ ಪಾಂಚಜನ್ಯ ಬೋಟಿನವರು ಮಾಲ್ತಿದೇವಿ ಬೋಟನ್ನು ಹಗ್ಗದಿಂದ ಕಟ್ಟಿ ಗಂಗೊಳ್ಳಿ ಬಂದರಿನ ಎಳೆದು ತರುವಾಗ ಗಂಗೊಳ್ಳಿ ಅಳಿವೆಯಿಂದ ಸುಮಾರು 8ರಿಂದ 10 ಮಾರು ದೂರ ಹಗ್ಗ ತುಂಡಾಯಿತು. ಇದರ ಕಾರಣ ಮಾಲ್ತಿದೇವಿ ಬೋಟು ನೀರಿನಲ್ಲಿ ಶೇ.90ರಷ್ಟು ಮುಳುಗಡೆಗೊಂಡಿತು. ಈ ವೇಳೆ ಈ ಬೋಟಿನಲ್ಲಿದ್ದ ಎಲ್ಲಾ ಮೀನುಗಾರರನ್ನು ದುರ್ಗಾ ಮತ್ತು ಪಾಂಚಜನ್ಯ ಬೋಟಿನವರು ರಕ್ಷಿಸಿದ್ದು, ಯಾವುದೇ ಜೀವ ಹಾನಿಯಾಗಿರುವುದಿಲ್ಲ ಎಂದು ತಿಳಿದುಬಂದಿದೆ.

ಬೋಟಿನಲ್ಲಿದ್ದ 1.90ಲಕ್ಷ ರೂ. ಮೌಲ್ಯದ 500 ಲೀಟರ್ ಡಿಸೇಲ್, ಎಂಟು ಟ್ರಾಲ್ ಬಲೆ, ಅಶೋಕ್ ಲೈಲ್ಯಾಂಡ್ ಇಂಜಿನ್, ಇತರೇ ಉಪಕರಣಗಳು ಸೇರಿದಂತೆ ಒಟ್ಟು 20,00,000ಲಕ್ಷ ರೂ. ನಷ್ಟ ಉಂಟಾಗಿದೆ. ಬಲೆ ಮತ್ತು ಇನ್ನಿತರ ಸಲಕರಣೆ ಗಳು ನೀರಿನಲ್ಲಿ ತೇಲಿ ಹೋಗಿರುವುದಾಗಿ ಕರಾವಳಿ ಕಾವಲು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.”


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113