tamanvi
ಕೃಷಿರಾಜ್ಯ ವಾರ್ತೆಸ್ಥಳೀಯ

ಪಹಣಿ ಪತ್ರ(RTC)ಕ್ಕೆ ಆಧಾರ್ ಲಿಂಕ್ ಕಡ್ಡಾಯ | ಮೊಬೈಲಿನಲ್ಲೇ ಹೀಗೆ ಲಿಂಕ್ ಮಾಡಿ…

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ. ಹಾಗಾದರೆ ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ?:
ನಿಮ್ಮ ಜಮೀನಿನ ಪಹಣಿ (rtc) ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈಗ ತುಂಬಾ ಸುಲಭ! ನೀವು ಈ ಕೆಲಸವನ್ನು ಮನೆಯಿಂದಲೇ ಮಾಡಬಹುದು.

ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಅನ್ನು ಜೋಡಣೆ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ https://landrecords.karnataka.gov.in/ ಅನ್ನು ಬಿಡುಗಡೆ ಮಾಡಲಾಗಿದೆ.

ಜಮೀನು ಹೊಂದಿರುವ ಸಾರ್ವಜನಿಕರು ಕಂದಾಯ ಇಲಾಖೆಯಿ ಈ ಅಧಿಕೃತ ವೆಬ್ಸೈಟ್ ಅನ್ನು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಭೇಟಿ ಮಾಡಿ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಜಮೀನಿನ ಪಹಣಿಗೆ (RTC) ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಬಹುದು.

  1. ಮೊದಲಿಗೆ https://landrecords.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಿ
  2. ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು captcha code ನ್ನು ಭರ್ತಿ ಮಾಡಿ
  3. send otp ಮೇಲೆ ಕ್ಲಿಕ್ ಮಾಡಿ otp ಯನ್ನು ನಮೂದಿಸಿ.
  4. ತದನಂತರ ಇಲ್ಲಿ ಜಮೀನು ಯಾರ ಹೆಸರಿಗೆ ಇದಿಯೋ ಅವರ ಆಧಾರ್ ಸಂಖ್ಯೆಯನ್ನು ಮತ್ತು ಅಧಾರ್ ನಲ್ಲಿರುವಂತೆಯೇ ಹೆಸರನ್ನು ಹಾಕಿ ಹಾಕಿ.
  5. ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇನೆ ಎಂಬ ಚೌಕದ ಮೇಲೆ ಕ್ಲಿಕ್ ಮಾಡಿ verify ಮೇಲೆ ಕ್ಲಿಕ್ ಮಾಡಿ.
  6. ಆಧಾರವನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ. fetch details ಮೇಲೆ ಕ್ಲಿಕ್ ಮಾಡಿ.

ಇಷ್ಟು ಮಾಡಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 167