ಕರಾವಳಿಸ್ಥಳೀಯ

ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು! ನೆಹರುನಗರ ರಕ್ತೇಶ್ವರಿ ಗುಡಿ ಬಳಿಯ ನಿವಾಸಿ, ನಿವೃತ್ತ ಸೈನಿಕ ಚಿದಾನಂದ ಕಾಮತ್ ಮೃತ್ಯು!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

core technologies

ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ.

akshaya college

ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಅವಿವಾಹಿತ. ತನ್ನ ತಾಯಿ ಜೊತೆ ವಾಸವಾಗಿದ್ದಾರೆ.

ಮೃತರು ತಾಯಿ, ವಿವೇಕಾನಂದ ಕಾಲೇಜು ಉಪನ್ಯಾಸಕ ರಮಾನಂದ ಕಾಮತ್, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಕಟ್ಟಡದಲ್ಲಿರುವ ಕಾಮತ್ಸ್ ಸ್ವೀಟ್ಸ್ ಮಾಲಕ ಮಂಜುನಾಥ್ ಕಾಮತ್ ಸಹಿತ ಐವರು ಸಹೋದರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 148