ಕರಾವಳಿಸ್ಥಳೀಯ

ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು! ನೆಹರುನಗರ ರಕ್ತೇಶ್ವರಿ ಗುಡಿ ಬಳಿಯ ನಿವಾಸಿ, ನಿವೃತ್ತ ಸೈನಿಕ ಚಿದಾನಂದ ಕಾಮತ್ ಮೃತ್ಯು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

core technologies

ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ.

ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಅವಿವಾಹಿತ. ತನ್ನ ತಾಯಿ ಜೊತೆ ವಾಸವಾಗಿದ್ದಾರೆ.

ಮೃತರು ತಾಯಿ, ವಿವೇಕಾನಂದ ಕಾಲೇಜು ಉಪನ್ಯಾಸಕ ರಮಾನಂದ ಕಾಮತ್, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಕಟ್ಟಡದಲ್ಲಿರುವ ಕಾಮತ್ಸ್ ಸ್ವೀಟ್ಸ್ ಮಾಲಕ ಮಂಜುನಾಥ್ ಕಾಮತ್ ಸಹಿತ ಐವರು ಸಹೋದರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹೊಸ ವರ್ಷಾಚರಣೆಗೆಂದು ತಂದಿದ್ದ 21.45 ಕೆ.ಜಿ. ಗಾಂಜಾ! ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಸ್ವತ್ತು ವಶ, ಇಬ್ಬರ ಬಂಧನ!

ಮಂಗಳೂರು: ಹೊಸ ವರ್ಷಾಚರಣೆಗೆಂದು ಮಾರಾಟ ಮಾಡಲು ತಂದಿದ್ದ 21 ಕೆಜಿ 450 ಗ್ರಾಂ ಗಾಂಜಾವನ್ನು…

ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಐವನ್‌ ಡಿʼಸೋಜಾ

ಬೆಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ…

1 of 154