ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸೆ. 7ರಂದು ಭೇಟಿ ನೀಡಿತು.
ಈ ಸಂದರ್ಭದಲ್ಲಿ ಕೇಂದ್ರದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ, ಅವರ ಕುಶಲೋಪಚಾರ ವಿಚಾರಿಸಲಾಯಿತು. ಅಲ್ಲದೆ, ಪಾಲನಾ ಕೇಂದ್ರದ ಚಟುವಟಿಕೆಗಳಿಗೆ ಸಂಘದ ವತಿಯಿಂದ ಅಗತ್ಯ ಸಹಕಾರ ನೀಡುವುದಾಗಿ ಆಡಳಿತ ಮಂಡಳಿ ಭರವಸೆ ನೀಡಿತು.
ಕಾರ್ಯಕ್ರಮದಲ್ಲಿ ಪಾಲನಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
























