tamanvi
ಸ್ಥಳೀಯ

ಜಾನಪದ ವಿದ್ವಾಂಸ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ನಾಳೆ ಶ್ರದ್ಧಾಂಜಲಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಾಹಿತಿ, ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಹಾಗೂ ಅಧ್ಯಕ್ಷರೂ ಆಗಿದ್ದ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಮೇ 21ರಂದು ಸಂಜೆ 4ಕ್ಕೆ ಶ್ರದ್ಧಾಂಜಲಿ ಸಭೆ ನಡೆಯಲಿದೆ.

ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘ ಹಾಗೂ ಬೊಳುವಾರು ವಿಶ್ವಕರ್ಮ ಯುವ ಸಮಾಜದ ಆಶ್ರಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರು ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ವಿಶ್ವಕರ್ಮ ಯುವ ಸಮಾಜದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಶ್ರದ್ಧಾಂಜಲಿ ಸಭೆಯಲ್ಲಿ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಹಿತೈಷಿಗಳು, ಸಮಾಜ ಬಾಂಧವರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 133