ಸ್ಥಳೀಯ

ಡಿವೈಎಸ್ಪಿ ಬ್ಯಾಂಕ್ ಖಾತೆಗೆ ಕನ್ನ! ಸೈಬರ್ ಕಳ್ಳರ ಕೈಚಳಕಕ್ಕೆ ಲಕ್ಷಾಂತರ ರೈ. ದೋಖಾ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ ಎಂದು ವರದಿಯಾಗಿದೆ.

chennai-shopping
maithri

ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ. ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯಶಾಖೆ ಹಾಗೂ ಭಾಗಮಂಡಲದ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ.

ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಮಡಿಕೇರಿಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಕೆನರಾಬ್ಯಾಂಕ್ ಭಾಗಮಂಡಲ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ 3,88,050 ರೂ. ಎಗರಿಸಿದ್ದಾರೆ. ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿದ್ದಾರೆ ಎಂದು ಹೇಳಲಾಗಿದೆ‌.

ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್‌ಪಿ ಬಿ.ಕೆ ಮುರುಳಿಧರ್ ದೂರು ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122