tamanvi
ಕರಾವಳಿಸ್ಥಳೀಯ

ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ! ಮಾತು ಉಳಿಸಿಕೊಂಡರೇ ಸಂಸದ ನಳಿನ್!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ ಅವರು ಠಾಣೆಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.

ಬೆಳ್ತಂಗಡಿ ಠಾಣಾ ಪೊಲೀಸರು ಹರೀಶ್ ಪೂಂಜಾ ಅವರ ಮನೆಗೆ ತೆರಳಿದ ಸಂದರ್ಭ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು. ಅದರಂತೆ ಸಂಸದರು ಹರೀಶ್ ಪೂಂಜಾರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿರುತ್ತಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 183