ರಾಜ್ಯ ವಾರ್ತೆಸ್ಥಳೀಯ

ಅಜ್ಞಾತ ಸ್ಥಳದಿಂದ ವೀಡಿಯೋ ಮಾಡಿದ ಪ್ರಜ್ವಲ್ ರೇವಣ್ಣ ವೀಡಿಯೊ!! ನ್ಯೂಸ್ ಚಾನೆಲ್, ಯೂಟ್ಯೂಬ್’ನಿಂದ ಮಾಹಿತಿ ಸಿಕ್ಕಿತೆಂದಿರುವ ಸಂಸದ

ಈ ಸುದ್ದಿಯನ್ನು ಶೇರ್ ಮಾಡಿ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

maithri

ವೀಡಿಯೋ ಮೂಲಕ ಮಾತನಾಡಿರುವ ಪ್ರಜ್ವಲ್, ಮೇ 31ಕ್ಕೆ ಬೆಂಗಳೂರಿಗೆ ಬಂದು ಎಸ್ ಐಟಿ ಎದುರು ಹಾಜರಾಗುವುದಾಗಿ ತಿಳಿಸಿದ್ದಾರೆ.

ತಂದೆ, ತಾಯಿ, ಕುಮಾರಣ್ಣ, ಹಾಸನದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಕ್ಷಮೆ ಕೇಳುತ್ತೇನೆ. ತನ್ನ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಮೇ 31ರಂದು ಬೆಳಗ್ಗೆ 10 ಗಂಟೆಗೆ ಎಸ್ ಐಟಿ ಮುಂದೆ ಹಾಜರಾಗುತ್ತೇನೆ. ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಸುಳ್ಳಿನ ಪ್ರಕರಣಗಳಿಂದ ಆಚೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ನನ್ನ ವಿರುದ್ದ ಷಡ್ಯಂತ್ರ ನಡೆದಿದೆ. ಇದನ್ನು ತಿಳಿದು ಬೇಸರಗೊಂಡು ದೂರವಾಗಿದ್ದೆ. ಮೇ 31ಕ್ಕೆ ಬರುತ್ತೇನೆ. ತಾತ, ತಂದೆ, ತಾಯಿ ಹಾಗೂ ಪಕ್ಷದ ಕಾರ್ಯಕರ್ತರ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.

ನಾನು ವಿದೇಶಕ್ಕೆ ಹೋಗುವುದು ಮೊದಲೇ ನಿಗದಿಯಾಗಿತ್ತು. ಪೂರ್ವನಿಗದಿ ಕಾರ್ಯಕ್ರಮದಂತೆ ವಿದೇಶಕ್ಕೆ ಹೋಗಿದ್ದೇನೆ. ಆಗ ನನ್ನ ಮೇಲೆ ಯಾವುದೇ ಪ್ರಕರಣ, ಕೇಸ್ ಆಗಲಿ ಇರಲಿಲ್ಲ. ಎಸ್ ಐಟಿ ರಚನೆಯೂ ಆಗಿರಲಿಲ್ಲ. ನಾನು ವಿದೇಶಕ್ಕೆ ಹೋದ ಬಳಿಕ ನ್ಯೂಸ್ ಚಾನೆಲ್ ಹಾಗೂ ಯೂಟ್ಯೂಬ್ ನೋಡಿದಾಗ ಈ ಮಾಹಿತಿ ಸಿಕ್ಕಿತು ಎಂದು ಹೇಳಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 157