ಸ್ಥಳೀಯ

ಆಟೋ ಚಾಲಕನ ಪತ್ನಿ, ಗೃಹಿಣಿ ಸಂಧ್ಯಾ ಆಚಾರ್ಯ ಆತ್ಮಹತ್ಯೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ.

maithri

ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ ಆಚಾರ್ಯ (45 ವ.) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಕಳೆದ 20 ವರ್ಷಗಳಿಂದ ಮನೋಜ್ ಅವರು ಪುತ್ತೂರಿನ ಮರೀಲ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.

ಮೇ 27ರಂದು ರಾತ್ರಿ ರಿಕ್ಷಾದಲ್ಲಿ ಬಾಡಿಗೆ ಮಾಡಲು ಮನೆಯಿಂದ ತೆರಳಿದ್ದ ಮನೋಜ್, ಮೇ 28ರಂದು ಬೆಳಿಗ್ಗೆ ಮನೆಗೆ ಹೋದಾಗ ಪತ್ನಿ ಮನೆಯ ಹಾಲ್‌ನ ಕಿಟಕಿಗೆ ನೇಣು ಬಿಗಿದು ಅಸ್ವಸ್ಥ ಸ್ಥಿತಿಯಲ್ಲಿದ್ದರು. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಸಂಧ್ಯಾ ಅವರು ಮೃತಪಟ್ಟಿದ್ದರು.

ಮೃತರು ಪತಿ ಮನೋಜ್, 13 ವರ್ಷ ಪ್ರಾಯದ ಪುತ್ರನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 125