tamanvi
ದೇಶಸ್ಥಳೀಯ

52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಿಸಿದ ದೆಹಲಿ! ಇದು ಇತಿಹಾಸದಲ್ಲಿಯೇ ಮೊದಲ ಬಾರಿಗೆ ದಾಖಲಾದ ಗರಿಷ್ಠ ತಾಪಮಾನ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಇರುವುದೇ ಹಾಗೆ. ಮಳೆ ಬಂದರೆ ಅತಿಯಾದ ಮಳೆ, ಚಳಿಗಾಲದಲ್ಲಿ ವಿಪರೀತ ಚಳಿ ಹಾಗೂ ಬೇಸಿಗೆಯಲ್ಲಿ ವಿಪರೀತ ಬಿಸಿಲು. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯ ಮಂಗೇಶ್‌ಪುರದಲ್ಲಿ ಬುಧವಾರ (ಮೇ 29) ಮಧ್ಯಾಹ್ನ 2.30ರ ಸುಮಾರಿಗೆ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದ ತಾಪಮಾನ ಇದಾಗಿದೆ ಎಂದು ತಿಳಿದುಬಂದಿದೆ. ಚುರುಗುಡುವ ಬಿಸಿಲು, ಮನೆಯಲ್ಲಿ ಕೂತರೂ ಬೆವರುವ ಪರಿಸ್ಥಿತಿ ಎದುರಾದ ಕಾರಣ ರಾಜಧಾನಿ ಪರಿತಪಿಸುವಂತಾಗಿದೆ ಎಂದು ತಿಳಿದುಬಂದಿದೆ. ಜನ

maithri

ದೆಹಲಿಯತ್ತ ಉಷ್ಣಮಾರುತ ಅಪ್ಪಳಿಸುತ್ತಿದೆ. ಮಳೆಯೂ ಇಲ್ಲದ ಕಾರಣ ಬಿಸಿಲು ಮತ್ತಷ್ಟು ಜೋರಾಗಿದೆ. ನಿರೀಕ್ಷೆಗಿಂತ ಬರೋಬ್ಬರಿ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗಿರುವುದು ಜನ ಹೈರಾಣಾಗುವಂತೆ ಮಾಡಿದೆ. ದೆಹಲಿಯಲ್ಲಿ 2002ರಲ್ಲಿ 49.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದೇ ಇದುವರೆಗಿನ ದಾಖಲೆಯಾಗಿತ್ತು. ಆದರೀಗ, ತಾಪಮಾನವು 50 ಡಿಗ್ರಿ ಸೆಲ್ಸಿಯಸ್ ದಾಟಿರುವುದು ಜನರಿಗೆ ಚಿಂತೆಯಾಗಿದೆ. ತಾಪಮಾನದ ಕುರಿತು ದೆಹಲಿಯ ಹವಾಮಾನ ಇಲಾಖೆಯ ಕಚೇರಿಯು ಮಾಹಿತಿ ನೀಡಿದೆ.

ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿದ್ಯುತ್ ಬೇಡಿಕೆ ಪ್ರಮಾಣವೂ ದಾಖಲೆಯಾಗಿದೆ. ದೆಹಲಿಯ ವಿದ್ಯುತ್ ಬಳಕೆಯು ಗುರುವಾರ ಮಧ್ಯಾಹ್ನದ 3.36ರ ಸುಮಾರಿಗೆ 8,300 ಮೆಗಾವ್ಯಾಟ್ ದಾಟಿದೆ. ಇದು ದೆಹಲಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಳಕೆಯಾದ ವಿದ್ಯುತ್ ಪ್ರಮಾಣ ಎಂಬ ದಾಖಲೆಯಾಗಿದೆ. ವಿದ್ಯುತ್ ಪೂರೈಕೆ ಕಂಪನಿಗಳ ಪ್ರಕಾರ ದೆಹಲಿಗೆ ನಿತ್ಯ 8,200 ಮೆಗಾ ವ್ಯಾಟ್ ವಿದ್ಯುತ್‌ ಬೇಕಾಗುತ್ತಿತ್ತು. ಆದರೆ, ತಾಪಮಾನ ಜಾಸ್ತಿಯಾದ ಕಾರಣ ಪ್ರತಿಯೊಂದು ಮನೆಯಲ್ಲೂ ನಿರಂತರವಾಗಿ ಫ್ಯಾನ್, ಕೂಲರ್ ಹಾಗೂ ಎ.ಸಿ ಬಳಸುತ್ತಿರುವ ಕಾರಣ ವಿದ್ಯುತ್ ಬೇಡಿಕೆಯೂ ದಾಖಲೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯ ನಜಾಫ್‌ಗಢ, ಮಂಗೇಶ್‌ಪುರ ಹಾಗೂ ನರೇಲಾದಲ್ಲಿ ಗುರುವಾರ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ಕನಿಷ್ಠ ಎಂಬಂತಾಗಿದೆ. ಇದರಿಂದಾಗಿ ಬಹುತೇಕ ನಗರಗಳಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ಇನ್ನು ಹೆಚ್ಚು ಮರುಭೂಮಿ ಹೊಂದಿರುವ ರಾಜಸ್ಥಾನದ ಫಲೋಡಿಯಲ್ಲಿ ಗರಿಷ್ಠ 51 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬಂಗಾಳ ಕೊಲ್ಲಿಯಿಂದ ತಂಪು ಗಾಳಿ ಬೀಸುತ್ತಿರುವ ಕಾರಣ ಉತ್ತರ ಪ್ರದೇಶದಲ್ಲಿ ತಾಪಮಾನ ನಿಯಮಿತವಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 148