tamanvi
ಸ್ಥಳೀಯ

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪುತ್ತೂರು ಆಸ್ಪತ್ರೆಗೆ ಭೇಟಿ! ಜನಸಂದಣಿ ನೋಡಿ ಸ್ಕ್ಯಾನ್ ಆ್ಯಂಡ್ ಶೇರ್ ಜಾರಿಗೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ ಸಂದರ್ಭ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

ಈ ಸಂದರ್ಭ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದರಿಂದ, ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ಸೂಚಿಸಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ಬಂದು ವೃಥಾ ಕಾಯುವ ಪರಿಸ್ಥಿತಿ ತಪ್ಪಲಿದೆ.

ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎನ್ನುವುದನ್ನು ಅವರ ಗಮನಕ್ಕೆ ತರಲಾಯಿತು.

ಆಸ್ಪತ್ರೆ, ಓಪಿಡಿ, ವೈದ್ಯಕೀಯ ಕೊಠಡಿ, ಡಯಲಿಸೀಸ್ ಕೇಂದ್ರಗಳಿಗೆ ಭೇಟಿ ನೀಡಿದರು.

ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ತಹಸೀಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಆಸ್ಪತ್ರೆ ಆಡಳಿತಾಧಿಕಾರಿ ಡಾ. ಆಶಾ ಪುತ್ತೂರಾಯ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134