ಸ್ಥಳೀಯ

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪುತ್ತೂರು ಆಸ್ಪತ್ರೆಗೆ ಭೇಟಿ! ಜನಸಂದಣಿ ನೋಡಿ ಸ್ಕ್ಯಾನ್ ಆ್ಯಂಡ್ ಶೇರ್ ಜಾರಿಗೆ ಸೂಚನೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

core technologies

ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ ಸಂದರ್ಭ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

akshaya college

ಈ ಸಂದರ್ಭ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದರಿಂದ, ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ಸೂಚಿಸಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ಬಂದು ವೃಥಾ ಕಾಯುವ ಪರಿಸ್ಥಿತಿ ತಪ್ಪಲಿದೆ.

ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎನ್ನುವುದನ್ನು ಅವರ ಗಮನಕ್ಕೆ ತರಲಾಯಿತು.

ಆಸ್ಪತ್ರೆ, ಓಪಿಡಿ, ವೈದ್ಯಕೀಯ ಕೊಠಡಿ, ಡಯಲಿಸೀಸ್ ಕೇಂದ್ರಗಳಿಗೆ ಭೇಟಿ ನೀಡಿದರು.

ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ತಹಸೀಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಆಸ್ಪತ್ರೆ ಆಡಳಿತಾಧಿಕಾರಿ ಡಾ. ಆಶಾ ಪುತ್ತೂರಾಯ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118