Gl
ಕರಾವಳಿಸ್ಥಳೀಯ

ಪ್ರಮಾಣಪತ್ರ ಸ್ವೀಕರಿಸಿದ ಕ್ಯಾಪ್ಟನ್ ಇನ್ನು ಸಂಸದ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು.

Pashupathi

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಕುಂಪಲ, ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಎಸಿ ಜುಬಿನ್ ಮೋಹಪಾತ್ರ ಉಪಸ್ಥಿತರಿದ್ದರು.

akshaya college

ನಿರೀಕ್ಷೆಗೂ ಮೀರಿದ ಗೆಲುವು:

ಕ್ಯಾಪ್ಟನ್ ಚೌಟ ಅವರು ಪಡೆದ ಮತಗಳು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರ ತಳಹದಿ ಎನ್ನುವುದನ್ನು ಮತ್ತೆ ನಿರೂಪಿಸಿದೆ. ಹಿಂದಿನ ಅವಧಿಯಷ್ಟು ಅಂತರ ಪಡೆಯದೇ ಹೋದರೂ, ಈ ಬಾರಿಯ ನಿರೀಕ್ಷೆಗಿಂತಲೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ.

ಒಟ್ಟು 764132 ಪಡೆದುಕೊಂಡ ಬ್ರಿಜೇಶ್ ಚೌಟ ಅವರು 149208 ಮತಗಳ ಅಂತರದಿಂದ ಕ್ಷೇತ್ರವನ್ನು ತಮ್ಮದಾಗಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು 614924 ಮತಗಳನ್ನು ಪಡೆದುಕೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113