tamanvi
ಸ್ಥಳೀಯ

ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!! ಅನುಮಾನಕ್ಕೆ ಕಾರಣವಾದ ರಾತ್ರಿ ಬಂದಿರೋ ಕೊನೆ ಕರೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

maithri

ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ.

ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಕರೆಯೊಂದು ಬಂದಿದ್ದು, ಮಾತನಾಡುತ್ತಾ ಹೊರ ಹೋಗಿದ್ದಾರೆ. ಎಷ್ಟು ಹೊತ್ತಾದರೂ ವಾಪಾಸು ಬಂದಿಲ್ಲ. ಮನೆಯವರು ಕರೆ ಮಾಡಿದರೂ ಸ್ವೀಕರಿಸಿಲ್ಲ. ಶನಿವಾರ ಬೆಳಿಗ್ಗೆ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಗಳಲ್ಲಿ ಮಂಜು ಪಾಲ್ಗೊಳ್ಳುತ್ತಿದ್ದು, ಉತ್ತಮ ಆಟಗಾರನಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಅಂಡರ್ ಆರ್ಮ್ ಕ್ರಿಕೆಟ್ ನಲ್ಲಿ ಉತ್ತಮ ಹೆಸರು ಗಳಿಸಿದ್ದರು.

ಮೃತರು ವೆಂಕಟೇಶ್ ನಾಯಕ್, ತಾಯಿ ಜಯಂತಿ, ತಮ್ಮ ಅಭಿಷೇಕ್ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125