tamanvi
ಸ್ಥಳೀಯ

ಟಿವಿ ಸೆಂಟರ್‌ನಲ್ಲಿ ಅಗ್ನಿ ಅವಘಡ: ಕೋಟ್ಯಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ.

ರವಿವಾರ ರಾತ್ರಿ 10:30ರ ಸುಮಾರಿಗೆ ಸುಧಾಕರ ಶೆಟ್ಟಿ ಮಾಲಿಕತ್ವದ ಅಂಬಾ ಟಿವಿ ಸೆಂಟರ್ ಒಳಗೆ ಸಂಭವಿಸಿದ ಶಾರ್ಟ್ ಸರ್ಕಿಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು, ಕುಂದಾಪುರ ಉಡುಪಿಯ ಮೂರು ಅಗ್ನಿಶಾಮಕದಳದ ವಾಹನಗಳು, ಗಂಗೊಳ್ಳಿ ಪೊಲೀಸರು, ಗಂಗೊಳ್ಳಿ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಸಪಟ್ಟರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134