tamanvi
ಸ್ಥಳೀಯ

ನರಿಮೊಗರು ಕಾಂಗ್ರೆಸ್ ವಲಯಾಧ್ಯಕ್ಷ ಪ್ರಕಾಶ್ ನಿಧನ!! ಹಠಾತ್ ಕಾಣಿಸಿಕೊಂಡ ಹೃದಯ ನೋವಿಗೆ ಬಲಿಯಾದ ಯುವಕ ಮಂಡಲದ ಮಾಜಿ ಅಧ್ಯಕ್ಷ!

D_shiva_bhat
ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

maithri

ಸಂಜೆ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮಂಗಳವಾರ ಸಂಜೆ ನರಿಮೊಗರು ಪರಿಸರದಲ್ಲಿ ಓಡಾಡುತ್ತಾ ಇದ್ದ ಇವರಿಗೆ, ಹಠಾತ್ ಹೃದಯ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿರುವ ಇವರು, ನರಿಮೊಗರು ವಲಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಿಂದೂಸ್ಥಾನ್ ಕಾಂಪ್ಲೆಕ್ಸ್ ನಲ್ಲಿ ಹಲವು ವರ್ಷಗಳಿಂದ ಮೊಬೈಲ್ ಸೇಲ್ಸ್ & ಸರ್ವೀಸ್ ಅಂಗಡಿಯನ್ನು ನಡೆಸುತ್ತಿದ್ದರು.

ಟ್ರೈ ಬ್ರೇಕರ್ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿಯೂ, ಟ್ರೈ ಬ್ರೇಕರ್ ಕ್ರಿಕೆಟ್ ತಂಡದ ಸ್ಥಾಪಕ ಸದಸ್ಯನಾಗಿಯೂ ಸಾಮಾಜಿಕ ಜೀವನದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ, ಪತ್ನಿ, ಮಕ್ಕಳು, ಸಹೋದರನನ್ನು ಆಗಲಿದ್ದಾರೆ‌.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

1 of 125