ಕರಾವಳಿಸ್ಥಳೀಯ

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸನ್ಮಾನ

D_shiva_bhat
ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

maithri

ಈ ಸಂದರ್ಭ ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಆರ್ಶೀವಾದ ಮಾಡಿದರು.

ಈ ಸಂದರ್ಭ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು.

ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಪದಾಧಿಕಾರಿಗಳು ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿ ಗೌರವಿಸಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ್ ದೇವಸ್ಯ, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕರಾದ ರಕ್ಷಿತ್ ಪುತ್ತಿಲ, ಸಾರಿಕಾ ಸುರೇಶ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 171