tamanvi
ಸ್ಥಳೀಯ

ತೈಲ ಬೆಲೆ ಏರಿಕೆ ಖಂಡಿಸಿ ರಸ್ತೆ ತಡೆದು ಪ್ರತಿಭಟಿಸಿದ ಪುತ್ತೂರು ಬಿಜೆಪಿ

ಪೆಟ್ರೋಲ್, ಡೀಸಿಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪುತ್ತೂರು ಬಿಜೆಪಿ ನಾಯಕರು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪೆಟ್ರೋಲ್, ಡೀಸಿಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪುತ್ತೂರು ಬಿಜೆಪಿ ನಾಯಕರು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.ಗುರುವಾರ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಬಿಜೆಪಿ ಪ್ರಮುಖರು, ಗಾಂಧಿಕಟ್ಟೆ ಬಳಿ ರಸ್ತೆ ತಡೆ ನಡೆಸಿದರು.ಪೊಲೀಸರು ಬಂದು ರಸ್ತೆ ತಡೆ ಮಾಡದಂತೆ ಮನವಿ ಮಾಡಿ ರಸ್ತೆಯಲ್ಲಿ ಕುಳಿತ ಪ್ರಮುಖರು, ಕಾರ್ಯಕರ್ತರನ್ನು ಎಬ್ಬಿಸುವ ಪ್ರಯತ್ನ ಮಾಡಿದರು. ಕೊನೆಗೆ ಪ್ರತಿಭಟನಾಕಾರರು ಕೋರ್ಟ್ ರಸ್ತೆಯ ಮೂಲಕ ತಾಲೂಕು ಆಡಳಿತ ಸೌಧದ ಮುಂದೆ ತಹಸೀಲ್ದಾರ್ ಕಚೇರಿ‌ ಮೂಲಕ ಸರಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆಯ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಬೈಸಿಕಲ್ ಸವಾರಿ ಗಮನ ಸೆಳೆಯಿತು.ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಅವರು ಮಾತನಾಡಿದರು.ಆಡಳಿತ ಸೌಧದ ಮುಂಭಾಗ ಮಾಜಿ ಶಾಸಕ ಸಂಜೀವ ಮಠಂದರೂರು ಮಾತನಾಡಿದರು.ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಮನವಿ ಪತ್ರವನ್ನು ‌ಮಂಡಿಸಿದರು.ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮೊದಲಾದವರು ಪ್ರಮುಖರು‌ ಕಾರ್ಯಕರ್ತರು ಭಾಗವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134