tamanvi
ಸ್ಥಳೀಯ

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವಯೋಗ ದಿನಾಚರಣೆ

D_shiva_bhat
ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಡೀನ್ ಮತ್ತು ವೈಸ್ ಪ್ರಿನ್ಸಿಪಾಲ್ ಶ್ರೀಮತಿ ಸುಜಾತ ದಿನೇಶ್ ಆರೋಗ್ಯ ಪೂರ್ಣ ಜೀವನ ನಡೆಸುವಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿ ಶಿಬಿರದಲ್ಲಿ ಭಾಗವಹಿಸಿದವರ ಜೊತೆ ಸಂವಾದ ನಡೆಸಿದರು.

ಯೋಗ ಪಟು ಸುಶ್ಮಿತಾ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವೇದಿಕೆಯಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ಆಡಳಿತ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ರಾವ್. ಎಂ, ಯಕ್ಷಗಾನ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಉಪಸ್ಥಿತರಿದ್ದರು.

ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿದರು. ಸಂಚಾಲಕ ಮಹೇಶ್ ಕನ್ಯಾಡಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 132