ಬೆಂಗಳೂರು: ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ತಿಳಿಸಿದ್ದಾರೆ.
ಬೆಂಗಳೂರು ಬಸವನಗುಡಿಯ ಶಂಕರಮಠದ ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ನಡೆಯುತ್ತಿರುವ ಬೆಳವಣಿಗೆ ಎಲ್ಲಾ ರಾಜಕಾರಣಿಗಳ ಬದುಕಿನಲ್ಲಿ ಕಂಡು ಬರಲಿದೆ. ಎಲ್ಲ ರಾಜಕಾರಣಿಗಳು ತಮ್ಮ ಕರ್ಮಕ್ಕೆ ಫಲ ಪಡೆಯುವ ದಿನ ಬಂದಿದೆ. ಅದು ಒಂದಿಬ್ಬರು ರಾಜಕಾರಣಿಗಳಲ್ಲ,” ಎಂದು ಅವರು ತಿಳಿಸಿದರು.ಮಾರ್ಚ್ 29 2025ರಿಂದ 2034ರ ವರೆಗೆ ವಿಶ್ವ ಸಂಕಷ್ಟದ ದಿನ ಎದುರಿಸಲಿದೆ. ಭಾರತದ ಮೇಲೆ 13 ರಾಷ್ಟ್ರಗಳು ಧಾಳಿ ಮಾಡಲಿವೆ. ಇದರಲ್ಲಿ ಕೆಲವು ಮಿತ್ರ ದೇಶಗಳು ಕೂಡಾ ಸೇರಿವೆ. ಈ ಯುದ್ಧದಲ್ಲಿ ಉತ್ತರ ಭಾರತ ಅಪಾರ ಕಷ್ಟ ಎದುರಿಸಲಿದೆ ಎಂದು ತಿಳಿಸಿದ ಅವರು ಪುರಿ ಜಗನ್ನಾಥ ದೇಗುಲ ಸಮುದ್ರದಲ್ಲಿ ಮುಳುಗುವ ಸಾಧ್ಯತೆ ಇದೆ ಎಂದು ತಿಳಿಸಿದರು.ವಿಶ್ವದಲ್ಲಿ ಈ ಅವಧಿಯಲ್ಲಿ ಹೊಸ ಸಾಂಕ್ರಾಮಿಕ ಮಹಾಮಾರಿ, ಯುದ್ಧ ನಡೆಯಲಿದೆ. 2024ರ ಬಳಿಕ ಸತ್ಯಯುಗ ಆರಂಭ ಬಳಿಕ ಎಲ್ಲವು ಬದಲಾಗಲಿದೆ ಎಂದು ಅವರು ತಿಳಿಸಿದರು.ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ನಮ್ಮ ಬೆಂಗಳೂರಿನಲ್ಲಿ ಶ್ರೀ ಮದ್ಭಾಗವತ ಮಹಾ ಪುರಾಣ ಕಥಾಮೃತ ಮತ್ತು ಭವಿಷ್ಯ ಮಾಲಿಕಾ ಪುರಾಣ ಕಾಯಕ್ರಮ ನಡೆಸಿಕೊಡಲು ಆಗಮಿಸಿದ್ದಾರೆ. ಇದೆ ಮೊದಲ ಬಾರಿಗೆ ಅವರು ನಮ್ಮ ಬೆಂಗಳೂರಿನಲ್ಲಿ ಆಸ್ತಿಕ ಮಹಾಶಯರನ್ನು ಹರಸಲಿದ್ದಾರೆ.ಜೂನ್ 24ರಿಂದ ಜೂನ್ 30ರವರೆಗೆ ಪ್ರತಿದಿನ ಸಂಜೆ 4ರಿಂದ 7ರವರೆಗೆ, ನಗರದ ಬಸವನಗುಡಿಯ ಶಂಕರಪುರಂನ ಶಂಕರ ಮಠದ ಶ್ರೀ ಭಾರತೀ ತೀರ್ಥ ಸಭಾ ಭವನದಲ್ಲಿ ಅವರು ಈ ಕಾಲಜ್ಞಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.ಈ ಗ್ರಂಥದ ಪ್ರಕಾರ ಈಗಿರುವ 795 ಕೋಟಿ ಜನರ ಪೈಕಿ ಕೇವಲ 64 ಕೋಟಿ ಜನರು ಮಾತ್ರ ಕಲಿಯುಗದಿಂದ ಸತ್ಯಯುಗಕ್ಕೆ ತೆರಳುತ್ತಾರೆ. ಮುಂದಿನ 8 ವರ್ಷಗಳಲ್ಲಿ ಜಗತ್ತು ಮೂರನೇ ಜಾಗತಿಕ ಮಹಾ ಯು ದ್ಧ, ಆಹಾ ರ ಧಾನ್ಯಗಳ ಕೊರತೆ, ಬಿರುಗಾಳಿಗಳು ಮತ್ತು ಸುಂಟರ ಗಾಳಿಗಳು, ಪ್ರವಾಹಗಳು ಮತ್ತು ಸುನಾಮಿಗಳು, ಜ್ವಾಲಾಮುಖಿ ಸ್ಫೋಟಗಳು ಮತ್ತು ಬೆಂಕಿಯಿಂದ ನಾಶ, ಭೂಕಂಪಗಳು, ಬರ ಮತ್ತು ಹಸಿವು, ಸಾಂಕ್ರಾಮಿಕ ರೋಗಗಳಿಂದ ಈ ಜಗತ್ತು ನಡುಗಲಿದೆ ಎಂದು ತಿಳಿಸಿದ್ದರು. ಈ ಪೈಕಿ ಈಗಾಗಲೇ ಕೆಲವು ಸತ್ಯವಾಗುತ್ತಿದ್ದು, ಪಂ. ಶ್ರೀ ಕಾಶಿನಾಥ್ ಮಿಶ್ರ ಅವರ ಭವಿಷ್ಯ ದರ್ಪಣ ಎಲ್ಲೆಡೆ ಪ್ರಖ್ಯಾತಿ ಹೊಂದುತ್ತಿದೆ.ಶ್ರೀ ಪುರಿಯ ಶ್ರೀ ಜಗನ್ನಾಥನ ಪರಮ ಭಕ್ತರಾದ ಪಂ. ಶ್ರೀ ಕಾಶಿನಾಥ್ ಮಿಶ್ರ ತ್ರಿಸಂಧ್ಯಾಧಾರ ಶ್ಲೋಕದ ಮೂಲಕ ಜಗತ್ತನ್ನು ರಕ್ಷಿಸಲು ತಮ್ಮ ಭಕ್ತರೊಂದಿಗೆ ಶ್ರಮಿಸುತ್ತಿದ್ದಾರೆ.ಈ ಭವಿಷ್ಯ ಮಾಲಿಕಾ ಗ್ರಂಥಗಳನ್ನು 600 ವರ್ಷಗಳ ಹಿಂದೆ ಪಂಚ ಸಖರು ಅಂದರೆ ದ್ವಾಪರ ಯುಗದ ಭಗವಾನ್ ಶ್ರೀ ಕೃಷ್ಣನ ಪರಮ ಮಿತ್ರರು ಕಲಿಯಗದಲ್ಲಿ ಪುನರ್ಜನ್ಮ ಪಡೆದು ಬರೆದು, ಮನುಕುಲದ ಭವಿಷ್ಯ ಬರೆದಿದ್ದಾರೆ. ಈ ಕೃಷ್ಣನ ಸ್ನೇಹಿತರೆಂದರೆ ಅಚ್ಯುತಾನಂದ ದಾಸ, ಬಲರಾಮ ದಾಸ, ಶಿಶು ಅನಂತ ದಾಸ, ಯಶವಂತ ದಾಸ, ಮತ್ತು ಜಗನ್ನಾಥ ದಾಸ (ಧಾಮ, ಸುಧಾಮ, ಸುಭಾಲ, ಸುಭಾವು, ಹಾಗು ಸುಭಾಕ್ಷ.) ಈ ಗ್ರಂಥದ ಜ್ಞಾನವನ್ನು ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಭಕ್ತರಿಗೆ ಅನುಗ್ರಹಿಸಲಿದ್ದಾರೆ.
ರಾಜಕಾರಣಿಗಳು ಕರ್ಮಕ್ಕೆ ತಕ್ಕ ಪಾಠ ಕಲಿಯುವ ದಿನ ಬಂದಿದೆ: ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ | ಭಾರತದ ಮೇಲೆ ದಾಳಿ ಮಾಡಲಿವೆಯಂತೆ ಮಿತ್ರರಾಷ್ಟ್ರ ಸಹಿತ 13 ರಾಷ್ಟ್ರಗಳು!!
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಬಲ್ನಾಡು: ದಂಡನಾಯಕ ದೈವದ ವಾಲಸರಿ ನೇಮ
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಏ.…
ಗಾಂಜಾ ಆರೋಪಕ್ಕೆ ವಿದ್ಯಾರ್ಥಿ ಬಲಿ: ಮೂವರು ಪೊಲೀಸರ ಅಮಾನತು!!
ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್…
ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ | ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ…
ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ: 106 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ…
ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ ನಾಳೆ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ನಾಳೆ…
ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026-29ರ ಅವಧಿಗೆ ಮಾಲಾಡಿ ಅಜಿತ್ ಕುಮಾರ್ ರೈ…
ಗೌಡ ಸಮುದಾಯ ಭವನದಲ್ಲಿ ದೇವರ ನೂತನ ಶಿಲಾಮಯ ಕಟ್ಟೆ | ಏ. 12ರಂದು ದೇವರಿಗೆ ಸಮರ್ಪಣೆ
ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂಭಾಗದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ಶಿಲಾಮಯ…
ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ
ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…
ಅಂಬಿಕಾದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದಿಂದ ಶಂಕರ ವಿಜಯ ಸ್ಪರ್ಧೆಗಳ ಆಯೋಜನೆ | ಸನಾತನ ವಿಚಾರಧಾರೆಗಳನ್ನು ಎಳೆಯರಿಗೆ ತಿಳಿಸಿಕೊಡುವುದು ಅಗತ್ಯ: ಬಾಲಕೃಷ್ಣ ಬೋರ್ಕರ್
ಪುತ್ತೂರು: ಸನಾತನ ಹಿಂದೂ ಧರ್ಮದ ಮೇಲೆ ನಿರಂತರವಾಗಿ ರಾಜಕೀಯ, ಧಾರ್ಮಿಕ ಹಾಗೂ ಸಾಂಸ್ಕೃತಿಕ…





















