Gl
ಸ್ಥಳೀಯ

ದಿ. ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ, ಲೇಖನ ಸ್ಪರ್ಧೆ | ಸ್ಪರ್ಧಾ ನಿಯಮಗಳು ಹೀಗಿವೆ…

ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ ಜುಲೈ 21 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ ಜುಲೈ 21 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

rachana_rai
Pashupathi
akshaya college
Balakrishna-gowda

ಈ ಒಂದು ದಿನದ ಕಾರ್ಯದಲ್ಲಿ ಗಂಗಾಧರ ಬೆಳ್ಳಾರೆ ಅವರ ಮಾತಿನ ಹಾಗೂ ಬರೆಹದ ಅಭಿಮಾನಿಗಳು, ಅವರ ಶಿಷ್ಯ ವರ್ಗ, ಅವರಿಂದ ಉಪ ಕೃತರಾದವರು ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತ, ನೊಂದಣಿ ಕಡ್ಡಾಯ.

pashupathi

ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರು ವಿಳಾಸವನ್ನು 15-07-2024 ಮೊದಲಾಗಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ 9844401295 ಗೆ ವಾಟ್ಸಪ್ ಮೂಲಕ ಕಳುಹಿಸಬೇಕು.

ಈ ಕಾರ್ಯವನ್ನು ಅರ್ಥಪೂರ್ಣವನ್ನಾಗಿಸುವ ನಿಟ್ಟಿನಲ್ಲಿ ‘ನನ್ನ ಜೀವನದಲ್ಲಿ ಗಂಗಾಧರ ಬೆಳ್ಳಾರೆ ಮಾತಿನ ಪರಿಣಾಮ’ ಎಂಬ ವಿಚಾರದಲ್ಲಿ ಲೇಖನ ಸ್ಪರ್ಧೆ ಏರ್ಪಡಿಸಲಾಗಿದೆ.

ಸ್ಪರ್ಧಾ ನಿಯಮಗಳು :
1. ಲೇಖನ 750 ಪದ ಮೀರಬಾರದು
2. ಲೇಖನವನ್ನು ಕನ್ನಡದಲ್ಲಿ ಟೈಪ್ ಮಾಡಿ ವಾಟ್ಸಪ್ ಮೂಲಕವೇ ಕಳಿಸತಕ್ಕದ್ದು.
3. ಲೇಖನದ ವಸ್ತು ವಿಚಾರ ಗಂಗಾಧರ ಬೆಳ್ಳಾರೆ ಯವರ ವರ್ತನಾ ವಿಶ್ಲೇಷಣಾ ಕಾರ್ಯಗಾರದಿಂದ ತಮಗಾದ ಪರಿಣಾಮದ ಕುರಿತು, ಅವರ ಕೃತಿಯನ್ನು ಓದಿ ತಮಗಾಗಿರುವ ಪರಿಣಾಮದ ಕುರಿತು, ಅವರ ಒಡನಾಟದಿಂದ ತಮಗಾಗಿರುವ ಪರಿಣಾಮದ ಕುರಿತು, ಅವರ ವಿಚಾರವನ್ನು ಇತರಿಂದ ತಿಳಿದು ತಮಗಾದ ಪರಿಣಾಮದ ಕುರಿತು ಬರೆಯಬಹುದಾಗಿದೆ.
4. ಲೇಖನವು ಗಂಗಾಧರ ಬೆಳ್ಳಾರೆ ಅವರ ವಿಚಾರ ಹೊರತುಪಡಿಸಿ ಅನ್ಯ ಮನೋವೈಜ್ಞಾನಿಕ ಅಥವಾ ವರ್ತನಾ ವಿಶ್ಲೇಷಣಾ ವಿಚಾರಗಳಿಗೆ ಅವಕಾಶ ಇಲ್ಲ.
5. ಉತ್ತಮ ಲೇಖನಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಪುಸ್ತಕ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.
6. ಉತ್ತಮ ಲೇಖನವನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣದಲ್ಲಿ ಪ್ರಕಟಿಸಲಾಗುವುದು.
7. ಲೇಖನ ತಲುಪಲು ಅಂತಿಮ ದಿನಾಂಕ 15.07.2024
8. ಲೇಖನವನ್ನು 9844401295 ಗೆ ವಾಟ್ಸಪ್ಪ್ ಮಾಡ ಬೇಕು
9. ವಿಶ್ವದ ಯಾವುದೇ ಮೂಲೆಯಲ್ಲಿರುವ ಗಂಗಾಧರ ಬೆಳ್ಳಾರೆ ಅವರ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಬಹುದು
10. ಬಹುಮಾನವನ್ನು 21-07-2024 ರಂದು ಪುತ್ತೂರಿನಲ್ಲಿ ನಡೆಯುವ ಕಾರ್ಯಗಾರದಲ್ಲಿ ನೀಡಿ ಗೌರವಿಸಲಾಗುವುದು.

ಗಂಗಾಧರ ಬೆಳ್ಳಾರೆ ಅವರ ಮಾತಿನಿಂದ ಬರೆಹ ಓದಿ ಪ್ರೇರಿತರಾದ , ಮನೋವೈಜ್ಞಾನಿಕ ವಿಚಾರದಿಂದ ಜೀವನದಲ್ಲಿ ಬದಲಾವಣೆ ಕಂಡವರು, ಅವರ ಅಭಿಮಾನಿ ವರ್ಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101