ಟ್ರೆಂಡಿಂಗ್ ನ್ಯೂಸ್ಸ್ಥಳೀಯ

‘ಗೋಪಣ್ಣ ಸ್ಮೃತಿ’ ಗೌರವಕ್ಕೆ ಯಕ್ಷ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಆಯ್ಕೆ | ಜುಲೈ 3ರಂದು ಅಗ್ರಹಾರದಲ್ಲಿ ಗೌರವ ಪ್ರದಾನ

GL
ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.

ಕಾರ‍್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯ ಅವರಿಗೆ ‘ಗೋಪಣ್ಣ ಸ್ಮೃತಿ ಗೌರವ’ವನ್ನು ಪ್ರದಾನಿಸಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ.

ಲಕ್ಷ್ಮೀಶ ಅಮ್ಮಣ್ಣಾಯ

ಹಿರಿಯ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಅವರು ಉಪ್ಪಿನಗಂಡಿ ಸನಿಹದ ಇಳಂತಿಲದವರು. ಇವರು ಶ್ರೀ ಧರ್ಮಸ್ಥಳ, ಮಂಗಳಾದೇವಿ, ಬಪ್ಪನಾಡು, ಪುತ್ತೂರು, ಅರುವ, ಕರ್ನಾಟಕ, ಕುಂಬಳೆ, ಕದ್ರಿ ಮೇಳಗಳಲ್ಲಿ ಇಪ್ಪತ್ತೆರಡು ವರುಷದ ಮೇಳ ತಿರುಗಾಟ ನಡೆಸಿದ್ದಾರೆ. ಬಳಿಕ ಹವ್ಯಾಸಿ ರಂಗದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಹಿಂದಿನ ವರುಷಗಳಲ್ಲಿ ಗೋಪಣ್ಣ ನೆನಪಿನ ಗೌರವವನ್ನು ದೇವದರ್ಜಿ ಅಳಕೆ ನಾರಾಯಣ ರಾವ್, ಮದ್ಲೆಗಾರ ವೆಂಕಟೇಶ ಉಳಿತ್ತಾಯರು, ಜ್ಯೋತಿಷಿ ಗಣಪತಿ ಭಟ್, ಅರ್ಥದಾರಿ ಪಾವಲಕೋಡಿ ಗಣಪತಿ ಭಟ್, ಯಕ್ಷಗುರು ಮೋಹನ ಬೈಪಾಡಿತ್ತಾಯರು, ಮದ್ಲೆಗಾರ ಪದ್ಯಾಣ ಜಯರಾಮ ಭಟ್, ಅಧ್ಯಾಪಿಕೆ ಬಿ. ಸುಲೋಚನಾ ಹಾಗೂ ಭಾಗವತ ಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ಪ್ರದಾನ ಮಾಡಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 128