Gl
ಟ್ರೆಂಡಿಂಗ್ ನ್ಯೂಸ್ಸ್ಥಳೀಯ

‘ಗೋಪಣ್ಣ ಸ್ಮೃತಿ’ ಗೌರವಕ್ಕೆ ಯಕ್ಷ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಆಯ್ಕೆ | ಜುಲೈ 3ರಂದು ಅಗ್ರಹಾರದಲ್ಲಿ ಗೌರವ ಪ್ರದಾನ

ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.

rachana_rai
Pashupathi
akshaya college

ಕಾರ‍್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯ ಅವರಿಗೆ ‘ಗೋಪಣ್ಣ ಸ್ಮೃತಿ ಗೌರವ’ವನ್ನು ಪ್ರದಾನಿಸಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ.

pashupathi

ಲಕ್ಷ್ಮೀಶ ಅಮ್ಮಣ್ಣಾಯ

ಹಿರಿಯ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಅವರು ಉಪ್ಪಿನಗಂಡಿ ಸನಿಹದ ಇಳಂತಿಲದವರು. ಇವರು ಶ್ರೀ ಧರ್ಮಸ್ಥಳ, ಮಂಗಳಾದೇವಿ, ಬಪ್ಪನಾಡು, ಪುತ್ತೂರು, ಅರುವ, ಕರ್ನಾಟಕ, ಕುಂಬಳೆ, ಕದ್ರಿ ಮೇಳಗಳಲ್ಲಿ ಇಪ್ಪತ್ತೆರಡು ವರುಷದ ಮೇಳ ತಿರುಗಾಟ ನಡೆಸಿದ್ದಾರೆ. ಬಳಿಕ ಹವ್ಯಾಸಿ ರಂಗದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಹಿಂದಿನ ವರುಷಗಳಲ್ಲಿ ಗೋಪಣ್ಣ ನೆನಪಿನ ಗೌರವವನ್ನು ದೇವದರ್ಜಿ ಅಳಕೆ ನಾರಾಯಣ ರಾವ್, ಮದ್ಲೆಗಾರ ವೆಂಕಟೇಶ ಉಳಿತ್ತಾಯರು, ಜ್ಯೋತಿಷಿ ಗಣಪತಿ ಭಟ್, ಅರ್ಥದಾರಿ ಪಾವಲಕೋಡಿ ಗಣಪತಿ ಭಟ್, ಯಕ್ಷಗುರು ಮೋಹನ ಬೈಪಾಡಿತ್ತಾಯರು, ಮದ್ಲೆಗಾರ ಪದ್ಯಾಣ ಜಯರಾಮ ಭಟ್, ಅಧ್ಯಾಪಿಕೆ ಬಿ. ಸುಲೋಚನಾ ಹಾಗೂ ಭಾಗವತ ಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ಪ್ರದಾನ ಮಾಡಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 102