ಸ್ಥಳೀಯ

ಟೂರ್ ಏಜೆನ್ಸಿಯಿಂದ (tour agency) ವಂಚನೆ, ಹಲ್ಲೆ ಆರೋಪ: ಉಪ್ಪಿನಂಗಡಿ ಮೂಲದ ಕುಟುಂಬದಿಂದ ಠಾಣೆಗೆ ದೂರು!

GL
ಅಜ್ಮೀರ್ ಯಾತ್ರೆಗೆ ಕರೆದೊಯ್ಯುವ ಉಪ್ಪಿನಂಗಡಿ ಮೂಲದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ, ಇದನ್ನು ಪ್ರಶ್ನಿಸಿದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅಜ್ಮೀರ್ ಯಾತ್ರೆಗೆ ಕರೆದೊಯ್ಯುವ ಉಪ್ಪಿನಂಗಡಿ ಮೂಲದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ, ಇದನ್ನು ಪ್ರಶ್ನಿಸಿದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿಸಲಾಗಿದೆ.

chennai-shopping
maithri

ಉಪ್ಪಿನಂಗಡಿಯ ಆತೂರು ಮೂಲದ ಮಹಮ್ಮದ್ ತ್ವಾಹ ಹಾಗೂ ಕುಟುಂಬಸ್ಥರಿಗೆ ಉಪ್ಪಿನಂಗಡಿ ಮೂಲದ ಉಪ್ಪಿನಂಗಡಿ ಮೂಲದ ಫಾರೂಕ್ ಎಂಬವರಿಗೆ ಸೇರಿದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಂಚಿಸಿದ ಬಗ್ಗೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಕುಮಾರಸ್ವಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಟ್ಟು 60 ಯಾತ್ರಿಕರಿದ್ದ ತಂಡ ಅಜ್ಮೀರ್ ಯಾತ್ರೆಗೆ ತೆರಳಿತ್ತು. ಟೂರ್ ಏಜೆನ್ಸಿ tour agency ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದು, 60 ಸಾವಿರ ರೂ. ಪ್ಯಾಕೇಜ್ ಗೊತ್ತು ಪಡಿಸಲಾಗಿತ್ತು. ಆದರೆ ಯಾತ್ರೆಯ ನಡುವಿನಲ್ಲಿ ಮಹಮ್ಮದ್ ತ್ವಾಹ ಕುಟುಂಬಸ್ಥರಲ್ಲಿ ಟೂರ್ ಏಜೆನ್ಸಿ ಹೆಚ್ಚುವರಿ ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದಾಗ, ಟೂರ್ ಏಜೆನ್ಸಿ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್‌ ಏಜೆನ್ಸಿಯವರು tour agency ಪ್ರತೀ ಪ್ಯಾಕೇಜ್ ಟೂರುಗಳಲ್ಲೂ ಯಾತ್ರಿಕರಿಗೆ ಇದೇ ರೀತಿ ಹಣ ವಂಚಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಮ್ಮದ್ ತ್ವಾಹ ಅವರ ಮೇಲೆ ಏಜೆನ್ಸಿ ಸಿಬ್ಬಂದಿ ಬಸ್ಸಿನಲ್ಲಿಯೇ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123