ದೇಶಸ್ಥಳೀಯ

17 ವರ್ಷ ಬಳಿಕ ಟಿ20 ವರ್ಲ್ಡ್ ಕಪ್ (t20 world cup) ಮುಡಿಗೇರಿಸಿಕೊಂಡ ಭಾರತ!ಕಣ್ಣೀರು ಸುರಿಸಿ ಸಂಭ್ರಮಿಸಿದ ಭಾರತೀಯ ಕ್ರಿಕೆಟ್ ಆಟಗಾರರು!!

D_shiva_bhat
ದಕ್ಷಿಣ ಆಫ್ರಿಕಾದ ಪ್ರಬಲ ಪೈಪೋಟಿಯ ನಡುವೆಯೂ ಟಿ20 ವರ್ಲ್ಡ್ ಕಪ್ t20 world cup ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದೆ. 10 ವರ್ಷದ ಬಳಿಕ ಭಾರತ ಟಿ20 ವರ್ಲ್ಡ್ ಕಪ್ ಗೆದ್ದುಕೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಆಫ್ರಿಕಾದ ಪ್ರಬಲ ಪೈಪೋಟಿಯ ನಡುವೆಯೂ ಟಿ20 ವರ್ಲ್ಡ್ ಕಪ್ t20 world cup ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದೆ. 17 ವರ್ಷದ ಬಳಿಕ ಭಾರತ ಟಿ20 ವರ್ಲ್ಡ್ ಕಪ್ ಗೆದ್ದುಕೊಂಡಿದೆ.

maithri

ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಭಾರತ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಫೈನಲ್ ಪಂದ್ಯವನ್ನು ಕೈವಶ ಮಾಡಿಕೊಂಡಿದೆ.

20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದ ಭಾರತ, ಎದುರಾಳಿ ದಕ್ಷಿಣ ಆಫ್ರಿಕಾಕ್ಕೆ 177 ರನ್ ಗಳ ಗುರಿ ನೀಡಿತು. ಇದನ್ನು ಬೆನ್ನತ್ತುವಲ್ಲಿ ವಿಫಲವಾದ ದಕ್ಷಿಣ ಆಫ್ರಿಕಾ ಆಟಗಾರರು 8 ವಿಕೆಟ್ ನಷ್ಟದೊಂದಿಗೆ 169 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ವಿಜಯಮಾಲೆ ಭಾರತದ ಕೊರಳಿಗೆ ತೊಡಿಸಲ್ಪಟ್ಟಿತು.

ವಿರಾಟ್ ಕೊಹ್ಲಿ 76, ಅಕ್ಷರ್ ಪಟೇಲ್ 46, ಶಿವಂ ದುಬೆ 27 ರನ್ ಗಳಿಸಿ ತಂಡಕ್ಕೆ ಬಲ ನೀಡಿದರು. ಬೌಲರ್ ಗಳಾದ ಹಾರ್ದಿಕ್ ಪಾಂಡ್ಯ 3, ಜಸ್ಪ್ರೀತ್ ಬೂಮ್ರಾ ಹಾಗೂ ಹರ್ಷ ದೀಪ್ ಸಿಂಗ್ ತಲಾ 2 ವಿಕೆಟ್ ಕಬಳಿಸಿದರು.

ಒಂದು ಹಂತದಲ್ಲಿ ದಕ್ಷಿಣ ಆಫ್ರಿಕಾ ಗೆದ್ದೇ ಬಿಟ್ಟಿತು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂತಹ ವಿಷಮ ಪರಿಸ್ಥಿತಿಯಲ್ಲಿ ಸೂರ್ಯ ಕುಮಾರ್ ಯಾದವ್ ಹಿಡಿದ ಕ್ಯಾಚ್, ಪಂದ್ಯದ ಇಡೀಯ ಚಿತ್ರಣವನ್ನೇ ಬದಲಿಸಿತು. ಎದುರಾಳಿಗಳನ್ನು ಉತ್ತಮ ಎಸೆತಗಳ ಮೂಲಕ ಕಟ್ಟಿಹಾಕಿದ ಭಾರತ ತಂಡ 7 ರನ್ ಗಳಿಗೆ ಜಯ ದಾಖಲಿಸಿದರು.

ಪಂದ್ಯ ಗೆಲ್ಲುತ್ತಿದ್ದಂತೆ ಹಾರ್ದಿಕ್ ಪಾಂಡ್ಯ ಆನಂದಭಾಷ್ಪ ಸುರಿಸಿ ಸಂಭ್ರಮಿಸಿದ ದೃಶ್ಯ ಕ್ರೀಡಾಂಗಣದಲ್ಲಿ ಕಂಡುಬಂದಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 148