tamanvi
ದೇಶಸ್ಥಳೀಯ

Crocodile: ಶಿವ ನದಿ ನೀರ ಬಿಟ್ಟು ನಡುರಸ್ತೆಯಲ್ಲಿ ನಡೆದಾಡಿದ ಮೊಸಳೆ: ವೀಡಿಯೋ ವೈರಲ್!!

ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ.

ಈ ಸುದ್ದಿಯನ್ನು ಶೇರ್ ಮಾಡಿ

ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ.

ನದಿಯಿಂದ ಬಂತೋ ಅಥವಾ ಮೃಗಾಲಯದಿಂದ ತಪ್ಪಿಸಿಕೊಂಡು ಬಂತೋ ಗೊತ್ತಿಲ್ಲ. ಆದರೆ ದೈತ್ಯ ಮೊಸಳೆ ನಡುರಸ್ತೆಯಲ್ಲಿ ರಾಜಾರೋಷವಾಗಿ ನಡೆದಾಡಿಕೊಂಡು ಹೋಗುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಿಪ್ಲುನ್ ಪ್ರದೇಶದ ಚಿಂಚನಕ ಪ್ರದೇಶದ ಜನರು ಇದೀಗ ಆತಂಕಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಇದೀಗ ಭಾರೀ ಮಳೆ. ಪರಿಣಾಮ ಪಕ್ಕದಲ್ಲೇ ಇರುವ ಶಿವನದಿಯಿಂದ ಮೊಸಳೆ ಹೊರ ಬಂದಿದೆ. ಶಿವನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ ಎಂದು ಜನರಾಡಿಕೊಳ್ಳುತ್ತಿದ್ದಾರಂತೆ.

ಮೊಸಳೆ ನಡುರಸ್ತೆಯಲ್ಲಿ ರಾಜಾರೋಷವಾಗಿ ನಡೆದಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಜನರು ಆತಂಕಗೊಂಡಿದ್ದಾರೆ. ಹಾಗೆಂದು ಹೀಗೆ ಮೊಸಳೆ ರಸ್ತೆಗೆ ಬರುವುದು ಇದೇ ಮೊದಲಲ್ಲ. ಶಿವ ನದಿ ಉಕ್ಕಿ ಹರಿದರೆ ಸಾಕಂತೆ, ಮೊಸಳೆಗಳು ರಸ್ತೆಗೆ ಬಂದುಬಿಡುತ್ತವೆ ಎನ್ನುತ್ತಾರೆ ಇಲ್ಲಿನ ಜನರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 156