tamanvi
ದೇಶಸ್ಥಳೀಯ

Crocodile: ಶಿವ ನದಿ ನೀರ ಬಿಟ್ಟು ನಡುರಸ್ತೆಯಲ್ಲಿ ನಡೆದಾಡಿದ ಮೊಸಳೆ: ವೀಡಿಯೋ ವೈರಲ್!!

D_shiva_bhat
ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ.

ಈ ಸುದ್ದಿಯನ್ನು ಶೇರ್ ಮಾಡಿ

ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ.

maithri

ನದಿಯಿಂದ ಬಂತೋ ಅಥವಾ ಮೃಗಾಲಯದಿಂದ ತಪ್ಪಿಸಿಕೊಂಡು ಬಂತೋ ಗೊತ್ತಿಲ್ಲ. ಆದರೆ ದೈತ್ಯ ಮೊಸಳೆ ನಡುರಸ್ತೆಯಲ್ಲಿ ರಾಜಾರೋಷವಾಗಿ ನಡೆದಾಡಿಕೊಂಡು ಹೋಗುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಿಪ್ಲುನ್ ಪ್ರದೇಶದ ಚಿಂಚನಕ ಪ್ರದೇಶದ ಜನರು ಇದೀಗ ಆತಂಕಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಇದೀಗ ಭಾರೀ ಮಳೆ. ಪರಿಣಾಮ ಪಕ್ಕದಲ್ಲೇ ಇರುವ ಶಿವನದಿಯಿಂದ ಮೊಸಳೆ ಹೊರ ಬಂದಿದೆ. ಶಿವನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ ಎಂದು ಜನರಾಡಿಕೊಳ್ಳುತ್ತಿದ್ದಾರಂತೆ.

ಮೊಸಳೆ ನಡುರಸ್ತೆಯಲ್ಲಿ ರಾಜಾರೋಷವಾಗಿ ನಡೆದಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಜನರು ಆತಂಕಗೊಂಡಿದ್ದಾರೆ. ಹಾಗೆಂದು ಹೀಗೆ ಮೊಸಳೆ ರಸ್ತೆಗೆ ಬರುವುದು ಇದೇ ಮೊದಲಲ್ಲ. ಶಿವ ನದಿ ಉಕ್ಕಿ ಹರಿದರೆ ಸಾಕಂತೆ, ಮೊಸಳೆಗಳು ರಸ್ತೆಗೆ ಬಂದುಬಿಡುತ್ತವೆ ಎನ್ನುತ್ತಾರೆ ಇಲ್ಲಿನ ಜನರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 148